ರಾಜಕೀಯ ಗುರುವನ್ನು ತುಳಿದ, ನಿಂಬೆ ಹಿಡಿದು ಕೊಳ್ಳುವವರು ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ: ನಳಿನ್ ಕುಮಾರ್

ಹಾಸನ: ಮುಖ್ಯಮಂತ್ರಿ ಆಗಲು ರಾಜಕೀಯ ಗುರುವನ್ನು ತುಳಿದ ಜನ, ದಿನವಿಡೀ ನಿಂಬೆಹಣ್ಣು ಹಿಡಿದುಕೊಳ್ಳುವವರು ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಹಾಸನ ಹೊರವಲಯದ ಹೆಚ್.ಕೆ.ಎಸ್ ಶಾಲೆಯಲ್ಲಿ ಆಯೋಜಿಸಿದ್ದ ರಾಜ್ಯ ಪ್ರಕೋಷ್ಠಗಳ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕಾಗಿ ಅಹಿಂದ ಬಗ್ಗೆ ಹೇಳುವವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಣ ಕೇಳಿದರೆ ಕೆಟ್ಟದಾಗಿ ಮಾತನಾಡುತ್ತೀರಿ. ಮಸೀದಿಗೆ, ಚರ್ಚ್ ಗೆ ನೀವು ಹಣ ಹಾಕಿದಾಗ ನಾವು ಮಾತನಾಡಲಿಲ್ಲ. ಜಾತ್ಯಾತೀತದ ಬಗ್ಗೆ ಮಾತನಾಡುವ ನೀವು ಒಂದು ದೇವಾಲಯ ನಿರ್ಮಾಣ ಮಾಡಲಿಲ್ಲ. ಈಗ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡುತ್ತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಆಕ್ರೊಶ ವ್ಯಕ್ತ ಪಡಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕ ಡ್ರಗ್ಸ್ ರಾಜ್ಯ ಆಗಿತ್ತು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಡ್ರಗ್ಸ್ ಮುಕ್ತ ರಾಜ್ಯ ಮಾಡಿದ್ರು. ಕಾಂಗ್ರೆಸ್ಸಿನವರು ಗರೀಬಿ ಹಠಾವೋ ಹೆಸರಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಕಾಂಗ್ರೆಸ್ಸಿನ ರಾಷ್ಟ್ರೀಯಾಧ್ಯಕ್ಷರು, ಉಪಾಧ್ಯಕ್ಷರು, ರಾಜ್ಯ ಅಧ್ಯಕ್ಷರು ಜಾಮೀನಿನಲ್ಲಿದ್ದಾರೆ ಎಂದು ಟೀಕಿಸಿದರು.

Leave a Reply

Your email address will not be published. Required fields are marked *

error: Content is protected !!