ವೈದ್ಯಕೀಯ ವಿದ್ಯಾರ್ಥಿಯಿಂದ ಕುಡಿದು ವಾಹನ ಚಾಲನೆ: ಪೊಲೀಸರಿಗೆ ಆವಾಜ್!

ಉಡುಪಿ: ವಿದ್ಯಾರ್ಥಿಯೊಬ್ಬ ಕುಡಿದು ಗಾಡಿ ಓಡಿಸುದ್ದು ಅಲ್ಲದೆ, ಇದಕ್ಕಾಗಿ ದಂಡ ಹಾಕಲು ಬಂದ ಸಂಚಾರ ಪೊಲೀಸ್ ಅಧಿಕಾರಿಗಳ ಮುಂದೆ ದರ್ಪ ತೋರಿದ ಘಟನೆ ಉಡುಪಿಯ ಕಲ್ಸಂಕ ಜಂಕ್ಷನ್ ಬಳಿ ನಡೆದಿದೆ.  

ಮಣಿಪಾಲ ವಿವಿಯ ಎಂಬಿಬಿಎಸ್ ವಿದ್ಯಾರ್ಥಿ ಅನುರಾಗ ರೆಡ್ಡಿ ಪೊಲೀಸರ ಮುಂದೆ ರಂಪಾಟ ಮಾಡಿದ ವಿದ್ಯಾರ್ಥಿ. ಕುಡಿದು ವಾಹನ ಚಾಲನೆ ಮಾಡುತ್ತಿದ್ದ. ಆತನನ್ನು ತಡೆದು ಪರಿಶೀಲನೆ ನಡೆಸಿದಾಗ ಆಲ್ಕೋಮೀಟರ್‍ನಲ್ಲಿ ಕುಡಿತದ ಪ್ರಮಾಣ 193 ತೋರಿಸಿತ್ತು. ಇದಕ್ಕಾಗಿ ಕಾನೂನಿನಂತೆ ಪೊಲೀಸರು ದಂಡ ಹಾಕಲು ಮುಂದಾಗಿದ್ದಾರೆ.

ಈ ವೇಳೆ, ಪೊಲೀಸರ ಎದುರು ದರ್ಪ ತೋರಿದ ವಿದ್ಯಾರ್ಥಿ ನನ್ನ ಅಪ್ಪ ಆಂಧ್ರದ ಎಂಪಿ, ಆಂಧ್ರ ಸರಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ನನ್ನ ಅಪ್ಪ ಆಪ್ತಮಿತ್ರರು. ನಾನು ಅವರಿಗೆ ಕರೆ ಮಾಡುತ್ತೇನೆ. ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ರೈಟ್ ಹ್ಯಾಂಡ್. ನೀವು ಅವರಲ್ಲಿಯೇ ಮಾತಾಡಿ ಎಂದು ಹೇಳಿದ್ದಾನೆ. ತಾನು ಯಾವುದೇ ಕಾರಣಕ್ಕೂ 3000 ರೂ.ಗಳಿಗಿಂತ ಹೆಚ್ಚಿನ ದಂಡ ಕಟ್ಟುವುದಿಲ್ಲ ಎಂದು ಹೇಳಿದ್ದಾನೆ.

ಸದ್ಯ, ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು, ಆರೋಪಿ ಅನುರಾಗ್ ರೆಡ್ಡಿಯ ಕಾರನ್ನು ಸೀಜ್ ಮಾಡಿದ್ದಾರೆ. ಅಲ್ಲದೇ ಆತನ ಮೇಲೆ ಮದ್ಯಪಾನ ಮಾಡಿ ವಾಹನ ಚಾಲನೆ, ಅತೀವೇಗದ ವಾಹನ ಚಾಲನೆ ಕೇಸ್ ಹಾಕಿದ್ದಾರೆ. ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!