ಉಡುಪಿ: ಜೆಡಿಎಸ್ ಮುಖಂಡ ದಿಲೇಶ್ ಶೆಟ್ಟಿ ಬಿಜೆಪಿ ಸೇರ್ಪಡೆ

ಉಡುಪಿ: ಜೆಡಿಎಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ವಿವಿಧ ಹುದ್ದೆಗಳನ್ನು ನಿಭಾಯಿಸಿ, ಪ್ರಸ್ತುತ ಜೆಡಿಎಸ್ ರಾಜ್ಯ ಕಾರ್ಯಾದರ್ಶಿಯಾಗಿದ್ದ ಬೆಳ್ಳಂಪಳ್ಳಿ ದಿಲೇಶ್ ಶೆಟ್ಟಿ ಪಕ್ಷಕ್ಕೆ ರಾಜಿನಾಮೆ ನೀಡಿ ಶನಿವಾರ ಬಿಜೆಪಿ ಸೇರ್ಪಡೆಯಾದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಗುರ್ಮೆ ಸುರೇಶ ಶೆಟ್ಟಿ ಅವರಿಂದ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಸೇರ್ಪಡೆಯಾದರು. ಈ ಸಂದರ್ಭ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಕುತ್ಯಾರ್ ನವೀನ್ ಶೆಟ್ಟಿ, ಶ್ರೀಶ ನಾಯಕ್ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!