ಯಡಿಯೂರಪ್ಪ ಸರ್ಕಾರಕ್ಕೆ ಮೀಸಲಾತಿಗಾಗಿ ಗಡುವು ನೀಡಿದ ಪಂಚಮಸಾಲಿ ಸಮುದಾಯ

ಬೆಂಗಳೂರು:  ಪಂಚಮಸಾಲಿ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಇಂದು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಹೀಗಾಗಿ ಸಮಾವೇಶದ ಬಳಿಕ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾರ್ಚ್ 4 ರಿಂದ ಧರಣಿ ನಡೆಸಲು ಪಂಚಮಸಾಲಿ ಸ್ವಾಮೀಜಿಗಳು ತೀರ್ಮಾನಿಸಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ 2ಎ ಮೀಸಲಾತಿ ಪ್ರಕಟಿಸಬೇಕೆಂದು ಪಟ್ಟು ಹಿಡಿದಿದ್ದ ಪಂಚಮಸಾಲಿ ಸಮುದಾಯ ಹಾಗೂ ಸ್ವಾಮೀಜಿ ಮಾತಿಗೆ ಸರ್ಕಾರ ಒಪ್ಪಿಗೆ ನೀಡಿಲ್ಲ. ಹೀಗಾಗಿ ಸಮುದಾಯದ ಜನರ ಒತ್ತಾಯದ ಮೇರೆಗೆ ಸಮಾವೇಶದಲ್ಲಿ ಭಾಗವಹಿಸಿದ್ದ ಸಾವಿರಾರು ಪಂಚಮಸಾಲಿ ಜನರೊಂದಿಗೆ ವಿಧಾನ ಸೌಧದತ್ತ ಪಾದಯಾತ್ರೆ ಮುಂದುವರೆಸಲು ನಿರ್ಧರಿಸಿದ್ದರು. ಮೊದಲಿಗೆ ವಿಧಾನ ಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸ್ ಆಯುಕ್ತ ಕಮಲ್ ಪಂತ್ ಮನವೊಲಿಕೆ ಹಿನ್ನಲೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ.

ಮತ್ತೊಂದೆಡೆ ಮುಖ್ಯಮಂತ್ರಿ ನಿವಾಸ,ವಿಧಾನ ಸೌಧ ಹಾಗೂ ಸುತ್ತಮು ತ್ತಲ ಪ್ರದೇಶಗಳಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನ ಸೌಧ, ಕುಮಾರಕೃಪಾ ರಸ್ತೆ,ಬೆಂಗಳೂರು ಬಳ್ಳಾರಿ, ರಸ್ತೆ, ಏರ್ಪೋಟ್ ರಸ್ತೆಗಳು ವಾಹನ ಸಂಚಾರನ್ನು ಪೊಲೀಸರು ಬದಲಾವಣೆ ಮಾಡಿದ್ದರು, ಹೀಗಾಗಿ ನಗರದಲ್ಲಿ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು.

Leave a Reply

Your email address will not be published. Required fields are marked *

error: Content is protected !!