ಸೆಕ್ಸ್ ಸಿಡಿ ರಿಲೀಸ್: ದೂರುದಾರ ದಿನೇಶ್ ಕಲ್ಲಹಳ್ಳಿ ವಿರುದ್ಧವೇ ದೂರು

ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಅಲ್ಲದೆ ಇದರಿಂದ ಸಾಹುಕಾರ್ ತಲೆದಂಡವಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

ಇದರ ಬೆನ್ನಲ್ಲೇ ಇದೀಗ ದೂರುದಾರ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧವೇ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ಸಿಡಿ ರಿಲೀಸ್ ಹಿಂದೆ ರಾಜಕೀಯ ಷಡ್ಯಂತ್ರವಿದೆ. ರಾಜಕೀಯ ಷಡ್ಯಂತ್ರದಿಂದ ಸಚಿವರ ತೇಜೋವಧೆ ಮಾಡಲಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ವಿರುದ್ಧವೇ ಕನ್ನಡ ಪರ ಒಕ್ಕೂಟ ಅಧ್ಯಕ್ಷ ಪುಟ್ಟೇಗೌಡ ದೂರು ನೀಡಿದ್ದಾರೆ.

ದಿನೇಶ್ ಕಲ್ಲಹಳ್ಳಿಗೂ ರಾಸಲೀಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಯುವತಿಗೆ ಅನ್ಯಾಯವಾಗಿದ್ದರೆ ಆಕೆ ಏಕೆ ದೂರ ನೀಡಿಲ್ಲ? ಇದೊಂದು ಬ್ಲ್ಯಾಕ್ ಮೇಲ್ ರಾಜಕಾರಣ ಎಂದು ದೂರಿನಲ್ಲಿ ಪುಟ್ಟೇಗೌಡರು ಆರೋಪಿಸಿದ್ದಾರೆ. 

ವಿಡಿಯೋಗಳನ್ನು ವೀಕ್ಷಿಸಿದರೆ ಸಮ್ಮತಿ ಲೈಂಗಿಕ ಕ್ರಿಯೆ ಥರ ಕಾಣುತ್ತಿದೆ. ಆದರೆ ಇದನ್ನು ಬಳಸಿಕೊಂಡು ಸಚಿವರ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ. ಈ ಬ್ಲ್ಯಾಕ್ ಮೇಲ್ ರಾಜಕಾರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕಲ್ಲಹಳ್ಳಿಯನ್ನ ತನಿಖೆ ನಡೆಸಬೇಕಿದೆ ಎಂದು ಒಕ್ಕೂಟ ಒತ್ತಾಯಿಸಿದೆ.

Leave a Reply

Your email address will not be published. Required fields are marked *

error: Content is protected !!