ರಾಜಕೀಯಕ್ಕೆ ಗುಡ್ ಬೈ ಹೇಳಿದ ಶಶಿಕಲಾ!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯೊಂದರಲ್ಲಿ ಎಐಎಡಿಎಂಕೆ ಉಚ್ಚಾಟಿತ ಮುಖಂಡೆ ವಿ. ಕೆ. ಶಶಿಕಲಾ ರಾಜಕೀಯಕ್ಕೆ ಬುಧವಾರ ಗುಡ್ ಬೈ ಹೇಳಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿರುವ ದಿವಂಗತ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ಶಶಿಕಲಾ, ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸುವಂತೆ ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ನಾಲ್ಕು ವರ್ಷಗಳ ಕಾಲ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದ ಶಶಿಕಲಾ ಇತ್ತೀಚಿಗೆ ಬಿಡುಗಡೆಯಾಗಿ ತಮಿಳುನಾಡಿಗೆ ವಾಪಸ್ ಆಗಿದ್ದರು

Leave a Reply

Your email address will not be published. Required fields are marked *

error: Content is protected !!