ರಮೇಶ್ ಜಾರಕಿಹೊಳಿ ಪರ ಶಾಸಕ ರೇಣುಕಾಚಾರ್ಯ ಬ್ಯಾಟಿಂಗ್

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಅನೇಕ ಪರ ವಿರೋಧ ಬೆಳವಣಿಗೆಗಳು ನಡೆಯುತ್ತಿದೆ. ಈ ನಡುವೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿಪರ ಶಾಸಕ ರೇಣುಕಾಚಾರ್ಯ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಈ ಪ್ರಕರಣ ನನಗೆ ತುಂಬಾ ನೋವು ತಂದಿದೆ. ಅವರು ರಾಜೀನಾಮೆ ಕೊಟ್ಟಾಗ ನಾನು ಮನೆಯಲ್ಲೆ ಕಣ್ಣೀರು ಹಾಕಿದ್ದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಮಾತು ಮುಂದುವರೆಸಿದ ಅವರು, ನಾನು ರಮೇಶ್ ಜಾರಕಿಹೊಳಿ ಪರ ನಿಲ್ಲುತ್ತೇನೆ ಎಂದ ಅವರು ಅವರು ಬಹಳ ಒಳ್ಳೆಯ ಮನುಷ್ಯ, ಅವರ ಮನೆಯವರ ಪರಿಸ್ಥಿತಿ ನೆನಪಿಸಿಕೊಂಡ್ರೆ ನೋವಾಗುತ್ತೆ. ಆ ಹುಡುಗಿ ಬಂದು ದೂರು ಕೊಟ್ಟಿಲ್ಲ. ಇದರಿಂದ ರಮೇಶ್ ಜಾರಕಿಹೊಳಿಯನ್ನ ಆರೋಪಿ ಅಂತಾನೂ ಹೇಳಲ್ಲ, ಅಪರಾಧಿ ಅಂತಾನೂ ಹೇಳಲ್ಲ ಎಂದು ಹೇಳಿದ್ದಾರೆ.

 ಇನ್ನೆಷ್ಟು ಸಿಡಿಗಳಿವೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದ ಅವರು,  ನಾನು ಬ್ಯುಸಿ ಇದ್ದ ಕಾರಣ ಮೂರು ವಿಡಿಯೋಗಳನ್ನ ಸರಿಯಾಗಿ ನೋಡಿಲ್ಲ. ಆ ವಿಡಿಯೋಗಳು ನಕಲಿ ಅಂತಾ ರಮೇಶ್ ಜಾರಕಿಹೊಳಿಯವರೇ ಹೇಳಿದ್ದಾರೆ ಎಂದರು.

Leave a Reply

Your email address will not be published. Required fields are marked *

error: Content is protected !!