ಬಂಟ್ವಾಳ: ಗಂಡನನ್ನು ಕತ್ತಿಯಿಂದ ಕಡಿದು ಕೊಂದ ಹೆಂಡತಿ

ಬಂಟ್ವಾಳ: ಗಂಡ ಹೆಂಡತಿಯ ನಡುವೆ ನಡೆದ ಜಗಳ ಪತಿಯ ಸಾವಿನಲ್ಲಿ ಅಂತ್ಯ ಕಂಡ ಘಟನೆ ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರ ಗ್ರಾಮದಲ್ಲಿ ನಡೆದಿದೆ. ನಾವೂರ ಸೂರ ಕ್ವಾಟ್ರಸ್ ನಿವಾಸಿ ಸೇಸಪ್ಪ ಪೂಜಾರಿ (60) ಮೃತಪಟ್ಟ ವ್ಯಕ್ತಿ. ಇದೀಗ ಘಟನೆಗೆ ಸಂಬಂಧಿಸಿ ಪತಿಯನ್ನು ಕೊಲೆ ಮಾಡಿದ ಆರೋಪದಡಿ ಪತ್ನಿ ಉಮಾವತಿ ( 52) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೇಸಪ್ಪ ಪೂಜಾರಿ ಅವರು ಕೂಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಪ್ರತಿದಿನ ಗಂಡ ಹೆಂಡತಿ ನಡುವೆ ಕುಡಿದು ಗಲಾಟೆ ನಡೆಯುತ್ತಿತ್ತು. ಅದರಂತೆ ಮಾ.3 ರಂದು ಈ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ. ಈ ಗಲಾಟೆ ಜೋರಾಗಿ ಹೊಡೆದಾಟದ ಹಂತಕ್ಕೆ ತಲುಪಿದೆ. ಈ ವೇಳೆ ಉಮಾವತಿಯವರು ತಮ್ಮ ಗಂಡ ಸೇಸಪ್ಪ ಅವರಿಗೆ ಮನೆಯಲ್ಲಿ ಇದ್ದ ಕತ್ತಿಯಿಂದ ಹೊಡೆದಿದ್ದಾರೆ. ಇದರಿಂದ ಸೇಸಪ್ಪ ಅವರ ಬಲಹಣೆಗೆ ಗಾಯವಾಗಿದ್ದು, ರಕ್ತಸ್ರಾವವಾಗುತ್ತಿದ್ದರೂ ಚಿಕಿತ್ಸೆ ಪಡೆಯದೆ ಮನೆಯಲ್ಲಿಯೇ ಉಳಿದುಕೊಂಡಿದ್ದರು. ಘಟನೆಯಿಂದ ಅಧಿಕ ರಕ್ತಸ್ರಾವ ಉಂಟಾಗಿ ಹುಷಾರಿಲ್ಲ ಎಂದು ಮಲಗಿದ್ದಲ್ಲಿಯೇ ಮಾ.5 ರಂದು ಸಂಜೆ ಅವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿ ಸೇಸಪ್ಪ ಅವರನ್ನು ಕೊಲೆ ಮಾಡಿದ ಆರೋಪದಡಿಯಲ್ಲಿ ಅವರ ಪತ್ನಿಯನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Leave a Reply

Your email address will not be published. Required fields are marked *

error: Content is protected !!