ಧರ್ಮಸ್ಥಳ: ವಿಷ ಸೇವಿಸಿದ್ದ ಬಿಕಾಂ ವಿದ್ಯಾರ್ಥಿನಿಯ ಸಾವು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ವಿಜು ಅವರ ಪುತ್ರಿ ವಿನ್ಸಿ(20) ಮೃತಪಟ್ಟವರು. ಇವರು  ಬೆಳ್ತಂಗಡಿ ನಗರದ ಕಾಲೇಜೊಂದರ ಅಂತಿಮ ಬಿ. ಕಾಂ. ವಿದ್ಯಾರ್ಥಿನಿಯಾಗಿದ್ದರು. ಇವರು ‌ಮಾ.14 ರಂದು ಯಾವುದೋ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಈ ವೇಳೆ ಅಸ್ವಸ್ಥ ಗೊಂಡಿದ್ದ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಾ. 23 ರಂದು ರಾತ್ರಿ  ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!