ಡಿಕೆಶಿ ಕಾರಿಗೆ ಚಪ್ಪಲಿ ಎಸೆದು ಧಿಕ್ಕಾರ ಕೂಗಿದ ಸಾಹುಕಾರ್ ಬೆಂಬಲಿಗರು!

ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪದ ಬೆನ್ನಲ್ಲೇ ಡಿಕೆಶಿ ಬೆಳಗಾವಿಗೆ ತೆರಳಿದ್ದು ಅವರಿಗೆ ಪ್ರತಿಭಟನೆ ಬಿಸಿ ತಗುಲಿದೆ. ಹೌದು ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆದು ಧಿಕ್ಕಾರಿ ಕೂಗಿದ್ದಾರೆ. 

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೋಟೆಲ್ ಗೆ ತೆರಳುತ್ತಿದ್ದ ವೇಳೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಡಿಕೆಶಿ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹೀಗಾಗಿ ಕಾರಿನ ಗಾಜುಗಳು ಜಖಂಗೊಂಡಿವೆ. 

ಇನ್ನು ಪರಿಸ್ಥಿತಿ ನಿಯಂತ್ರಿಸಲು ಬೆಳಗಾವಿ ಜಿಲ್ಲಾ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಚ್ ನಡೆಸಿ ಗುಂಪನ್ನು ಚದುರಿಸುತ್ತಿದ್ದಾರೆ. ಇನ್ನು ಹಲವಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. 

ಬೆಳಗಾವಿ ಲೋಕಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ನಾಳೆ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗುವ ಸಂಬಂಧ ಡಿಕೆ ಶಿವಕುಮಾರ್ ಬೆಳಗಾವಿಗೆ ತೆರಳಿದ್ದರು. 

Leave a Reply

Your email address will not be published. Required fields are marked *

error: Content is protected !!