ಮುಂಬೈಗೆ ಪರಾರಿಯಾಗಲು ಯತ್ನಿಸಿದ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ

ಮೂಡುಬಿದಿರೆ: ಅನ್ಯಕೋಮಿನ ಯುವಕನೊಂದಿಗೆ ಮುಂಬೈಗೆ ತೆರಳುತ್ತಿದ್ದ ಹಿಂದೂ ಯುವತಿಯನ್ನು ಭಜರಂಗದಳದ ಕಾರ್ಯಕರ್ತರು ರಕ್ಷಿಸಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಮುಂಬೈಗೆ ಪರಾರಿಯಾಗಲು ಹೊರಟಿದ್ದ ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕನನ್ನು ಭಜರಂಗದಳ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಅನ್ಯ ಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಗುರುಪುರ ಕೈಕಂಬದಲ್ಲಿ ಮುಂಬೈಗೆ ಹೋಗುವ ಬಸ್ ಹತ್ತಿದ್ದಳು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಭಜರಂಗದಳದ ಕಾರ್ಯಕರ್ತರು ಬಸ್ಸನ್ನು ಮೂಡುಬಿದಿರೆಯಲ್ಲಿ ತಡೆದಿದ್ದು ರಕ್ಷಿಸಿದ್ದಾರೆ. ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಮುಂಬೈಗೆ ಪರಾರಿಯಾಗಲು ತಯಾರಾಗಿ ಬಂದಿದ್ದರು ಎನ್ನಲಾಗಿದೆ.

ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. 

Leave a Reply

Your email address will not be published. Required fields are marked *

error: Content is protected !!