ಶ್ರೀ ವನದುರ್ಗ ದೇವಸ್ಥಾನ ಈದು: ಅಧ್ಯಕ್ಷರಾಗಿ ಪುರುಷೋತ್ತಮ ರಾವ್ ಆಯ್ಕೆ

ಉಡುಪಿ (ಉಡುಪಿ ಟೈಮ್ಸ್ ವರದಿ): ಇತ್ತೀಚೆಗೆ ಶ್ರೀ ವನದುರ್ಗ ದೇವಸ್ಥಾನ ಈದು ಕೇರ ಪಿಜತ್ತಕಟ್ಟೆ ಇದರ ಸಮಿತಿಯ ಸಭೆ ದೇವಸ್ಥಾನ ವಠಾರದಲ್ಲಿ ನಡೆಯಿತು. ಈ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ

ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ಎನ್ ಇ, ಕೋಶಾಧಿಕಾರಿಯಾಗಿ ಅನಂತ ಭಟ್, ಕಾರ್ಯದರ್ಶಿಯಾಗಿ ಗಂಗಾಧರ ಗೌಡ, ಉಪಾಧ್ಯಕ್ಷರಾಗಿ ಸದಾನಂದ ಕೇರ, ರಮೇಶ್ ಪಾಲಡ್ಕ, ಜತೆ ಕಾರ್ಯದರ್ಶಿಯಾಗಿ ಸುರೇಶ್ ಆಚಾರ್ಯ ಮದ್ರೊಟ್ಟು ಅವರನ್ನು ಆಯ್ಕೆ ಮಾಡಲಾಯಿತು. ಅಲ್ಲದೆ ಈ ಸಭೆಯಲ್ಲಿ ಸದಸ್ಯರುಗಳು, ಗೌರವ ಸಲಹೆಗಾರರು, ಪ್ರಧಾನ ಸಲಹೆಗಾರರು, ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Leave a Reply

Your email address will not be published. Required fields are marked *

error: Content is protected !!