ಕಳೆದ ಬಾರಿ ಕರೋನಾ ಬಂದಾಗ ಈಜುಕೊಳದಲ್ಲಿ ಮೋಜು-ಈಗ ಕಂಡವರ ಹೆಂಡತಿಯರ ಲೆಕ್ಕ ಹಾಕುವ ಡಾ. ಸುಧಾಕರ್ : ಕಾಂಗ್ರೆಸ್ ಟ್ವೀಟ್

ಬೆಂಗಳೂರು: ಕಳೆದ ವರ್ಷ ಕರೋನಾ ಬಂದಾಗ ಸ್ವಿಮ್ಮಿಂಗ್ ಪೂಲ್ ‌ನಲ್ಲಿ ಮೋಜು ಮಾಡುತ್ತಿದ್ದರು. ಈ ಭಾರಿ ಕರೋನಾ ಉಲ್ಬಣಿಸಿದಾಗ ಸಿಡಿಗೆ ತಡೆಯಾಜ್ಞೆ ತರುವುದರಲ್ಲಿ, ಕಂಡವರ ಹೆಂಡತಿಯರ ಲೆಕ್ಕ ಹಾಕುವುದರಲ್ಲಿ ಬ್ಯುಸಿಯಾಗಿದ್ದರ ಪರಿಣಾಮ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್, ಆರೋಗ್ಯ ಸಚಿವ ಕೆ. ಸುಧಾಕರ್ ಅವರಿಗೆ ಟ್ವೀಟ್ ಮಾಡಿ ಲೇವಡಿ ಮಾಡಿದೆ.

ಕೋವಿಡ್‌ ಟೆಸ್ಟ್‌ಗಳನ್ನು ಕಡಿಮೆ ಮಾಡಿ ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡು ಕುಳಿತಿದ್ದರ ಪರಿಣಾಮವಿದು. ಸಂಪೂರ್ಣ ಟ್ರಯಲ್ ಪ್ರಕ್ರಿಯೆ ಮುಗಿಸದ ವ್ಯಾಕ್ಸಿನ್‌ಗಳ ಮಾರ್ಕೆಟಿಂಗ್ ಮಾಡುವುದರಲ್ಲಿ ಮುಳುಗಿದ್ದರ ಪರಿಣಾಮವಿದು ಎಂದು ಲೇವಡಿ ಮಾಡಿದೆ. 

ಸೋಂಕಿತ ಸರ್ಕಾರ ಕರೋನಾ ಹೆಸರಲ್ಲಿ ಭ್ರಷ್ಟಾಚಾರ ನಡೆಸಿದ್ದರಿಂದ ಇಂದು ಸೋಂಕು ದಾಖಲೆ ಮಟ್ಟಕ್ಕೇರಿದೆ ಎಂದು ಟ್ವೀಟ್ ಮಾಡಿದೆ. 

Leave a Reply

Your email address will not be published. Required fields are marked *

error: Content is protected !!