ಬೈಲೂರು: ನಿಲ್ಲಿಸಿದ್ದ ಆಟೋ ರಿಕ್ಷಾ ಮತ್ತು ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಉಡುಪಿ: (ಉಡುಪಿ ಟೈಮ್ಸ್ ವರದಿ)ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಎರಡು ಪ್ರತ್ಯೇಕ ಘಟನೆ ನಗರದಲ್ಲಿ ನಡೆದಿದೆ. ಒಂದು ಪ್ರಕರಣದಲ್ಲಿ ಬೈಲೂರು 76 ಬಡಗುಬೆಟ್ಟು ಗ್ರಾಮದ ಹರೀಶ್ ಕುಮಾರ್ ಭಟ್ ಅವರು ಏ.5 ರಂದು ಮನೆಯ ಅಂಗಳದಲ್ಲಿ ತಮ್ಮ ಬೈಕ್ ಪಾರ್ಕ್ ಮಾಡಿದ್ದರು. ತಡರಾತ್ರಿ  ಮನೆಗೆ ನುಗ್ಗಿದ ದುಷ್ಕರ್ಮಿಗಳು ಹರೀಶ್ ಅವರು ಮನೆಯಿಂದ ಹೊರಗೆ ಬರದಂತೆ ಮನೆಯ ಹೊರಗೆಯಿಂದ ಚಿಲಕ ಹಾಕಿ ಬೈಕ್‍ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಗೆ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ರೂ. 20,000 ನಷ್ಟ ಉಂಟಾಗಿದೆ ಎಂದು ಹರೀಶ್ ತಿಳಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಬೈಲೂರು 76 ಬಡಗುಬೆಟ್ಟು ಗ್ರಾಮದ ಅಬ್ದುಲ್ ರಶೀದ್ ಎಂಬವರು  ಏ.5 ರಂದು ಮನೆಮುಂದೆ ತಮ್ಮ ರಿಕ್ಷಾವನ್ನು  ಪಾರ್ಕ್ ಮಾಡಿದ್ದರು. ಈ ವೇಳೆ ತಡರಾತ್ರಿ ಮನೆಗೆ ಬಂದ ಯಾರೋ ಇಬ್ಬರು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ರಿಕ್ಷಾ ಸಂಪೂರ್ಣ ಸುಟ್ಟು  ಕರಕಲಾಗಿದೆ. ಘಟನೆಯಿಂದ ಸುಮಾರು ರೂ. 2,25,000 ನಷ್ಟ ಉಂಟಾಗಿದೆ ಎಂದು ಅಬ್ದುಲ್ ರಶೀದ್ ಅವರು ತಿಳಿಸಿದ್ದಾರೆ.

ಎರಡೂ ಪ್ರಕರಣಕ್ಕೆ ಸಂಬಂದಿಸಿ ವಾಹನದ ಮಾಲಕರು ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!