ಕಾಸರಗೋಡು: ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ, ಓರ್ವನ ಸಾವು, ಇನ್ನೋರ್ವ ಗಂಭೀರ

ಮೃತ ಪುಳ್ಳಕರೆಯ ಮನ್ಸೂರ್

ಕಾಸರಗೋಡು: ಚುನಾವಣೆ ಮುಗಿದ ಬಳಿಕ ನಡೆದ ಘರ್ಷಣೆಗೆ ಸಂಬಂಧಿಸಿ ನಡೆದ ಹಲ್ಲೆಯಲ್ಲಿ ಗಂಭೀರ ಗಾಯಗೊಂಡಿದ್ದ ಯೂತ್ ಲೀಗ್ ಕಾರ್ಯಕರ್ತನೋರ್ವ ಇಂದು (ಏ.7) ಬೆಳಿಗೆ ಮೃತಪಟ್ಟಿದ್ದಾರೆ. ಕೂತು ಪರಂಬ ಪುಳ್ಳಕರೆಯ ಮನ್ಸೂರ್ (22) ಮೃತಪಟ್ಟ ವ್ಯಕ್ತಿ. ಘಟನೆಯಲ್ಲಿ ಸಹೋದರ ಮುಹಸಿನ್ (27) ಗಂಭೀರ ಗಾಯಗೊಂಡಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತು ಪರಂಬ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಏ. 6 ರಂದು ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಮನ್ಸೂರ್ ನ ಸಹೋದರ ಮುಹಸಿನ್ ಮತಗಟ್ಟೆ ಯು.ಡಿ. ಎಫ್ ಏಜಂಟ್ ಆಗಿದ್ದು, ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡವು ಬೆದರಿಕೆ ಒಡ್ಡಿತ್ತು ಎನ್ನಲಾಗಿದೆ. ಬಳಿಕ ರಾತ್ರಿ 8.30 ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದಿದೆ. ಅಲ್ಲದೆ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಂಡ ಪರಾರಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡ ಮನ್ಸೂರ್ ಹಾಗೂ ಮುಹಸಿನ್ ರನ್ನು ಕೋಝಿಕ್ಕೋಡ್ ನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!