ಉಡುಪಿ, ದ.ಕ, ಉ.ಕ- ಏ.13 ರವರೆಗೆ ಗುಡುಗು- ಸಹಿತ ಮಳೆಯಾಗಲಿದೆ: ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಏಪ್ರಿಲ್ 9 ರಿಂದ 13 ರವರೆಗೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಹಾಗೂ ಚಾಮರಾಜನಗರ, ರಾಮನಗರ, ಮೈಸೂರು ಭಾಗದಲ್ಲಿ 4 ದಿನ ಮತ್ತು ಬೆಳಗಾವಿ, ಧಾರವಾಡ, ಕಲ್ಬುರ್ಗಿಯಲ್ಲಿ ಏಪ್ರಿಲ್ 9 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!