ಸಂತ್ರಸ್ತ ಯುವತಿ ಎಸ್&ಐಟಿ ಮುಂದೆ ನೀಡಿರುವ ಹೇಳಿಕೆ ಭಾರೀ ಸಂಚಲನ!

ಬೆಂಗಳೂರು ಏ.12: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ದೊಡ್ಡದೊಂದು ತಿರುವು ಸಿಕ್ಕಿದೆ. ಇದೀಗ ವಿಚಾರಣೆ ವೇಳೆ ಪ್ರಕರಣದ ಸಂತ್ರಸ್ತ ಯುವತಿ ಎಸ್‍ಐಟಿ ಮುಂದೆ ನೀಡಿರುವ ಹೇಳಿಕೆ ಪ್ರಕರಣ ಕುರಿತಂತೆ ಭಾರೀ ಸಂಚಲನ ಸೃಷ್ಟಿಸಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿ ನನ್ನನ್ನು ಹನಿಟ್ರ್ಯಾಪ್‍ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ನರೇಶ್ ಮತ್ತು ಶ್ರವಣ್ ವಿರುದ್ಧ ಸಿಡಿ ಪ್ರಕರಣದ ಯುವತಿ ಆರೋಪ ಮಾಡಿದ್ದಾರೆ ಎಂದು ವರದಿಯಾಗಿದೆ.

ಎಸ್‍ಐಟಿ ತನಿಖಾಧಿಕಾರಿ ಕವಿತಾ ಮುಂದೆ ಹೇಳಿಕೆ ನೀಡಿರುವ ಯುವತಿ, ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್ ಎಂದು ನೇರವಾಗಿ ಹೇಳಿದ್ದಾರೆ. ಸದ್ಯ ಯುವತಿ ಹೇಳಿಕೆಯನ್ನು ರೆಕಾರ್ಡ್ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಯುವತಿ ನೀಡಿರುವ ಹೇಳೀಕೆಯಲ್ಲಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧವಾಗಿ ನನ್ನ ಹೇಳಿಕೆ ಪೂರ್ಣ ಪ್ರಮಾಣದ ಸತ್ಯ ಅಲ್ಲ. ನರೇಶ್ ಹಾಗೂ ಶ್ರವಣ್ ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡರು. ಈ ಕಾರಣಕ್ಕಾಗಿ ಅವರು ಹೇಳಿದಂತೆ ನಾನು ಕೇಳಿದೆ. ಅವರು ಒತ್ತಡ ನೀಡಿದ ಕಾರಣ ನಾನು ಆ ರೀತಿ ಹೇಳಿಕೆ ಕೊಟ್ಟಿದ್ದೆ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!