1-9ನೇ ತರಗತಿ ಪರೀಕ್ಷೆ ಇಲ್ಲ, ಮೌಲ್ಯಾಂಕನ ಆಧರಿಸಿ ಪಾಸ್- ಶಿಕ್ಷಣ ಸಚಿವ ಸುರೇಶ್​

ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಬಲವಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು 1 ರಿಂದ 9ನೇ ತರಗತಿ ಪರೀಕ್ಷೆ ಇಲ್ಲದೆ ವಿಶ್ಲೇಷಣಾ ಮೌಲ್ಯಾಂಕನ ಆಧರಿಸಿ ಪಾಸ್  ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು,  ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್​ಕುಮಾರ್ ಮೌಖಿಕ ಆದೇಶ ನೀಡಿದ್ದು ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ಲಭಿಸಿದೆ.ಇನ್ನು ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

error: Content is protected !!