ಬಡ ಕುಟುಂಬಕ್ಕೆ ಶೌಚಾಲಯ, ಸ್ನಾನಗೃಹ ನಿರ್ಮಿಸಿ ಕೊಟ್ಟ ಉಡುಪಿ ಗ್ರಾಮಾಂತರ ಬಿಜೆಪಿ

ಉಡುಪಿ ಎ.27(ಉಡುಪಿ ಟೈಮ್ಸ್ ವರದಿ): ಅಂಬೇಡ್ಕರ್ ಜಯಂತಿ ಪ್ರಯುಕ್ತ ಉಡುಪಿ ಗ್ರಾಮಾಂತರ ಬಿಜೆಪಿ ವತಿಯಿಂದ ಬಡ ಕುಟುಂಬಕ್ಕೆ ಶೌಚಾಲಯ ಮತ್ತು ಸ್ನಾನದ ಕೊಠಡಿ ನಿರ್ಮಿಸಿ ಕೊಡಲಾಯಿತು.

ಬ್ರಹ್ಮಾವರದ ಬೈಕಾಡಿ ಬಸ್ ಸ್ಟ್ಯಾಂಡ್ ಹತ್ತಿರದಲ್ಲಿ ವಾಸವಾಗಿರುವ ಗಿರಿಜಾ ಪೂಜಾರ್ತಿ ಹಾಗೂ ಶಂಕರ ಪೂಜಾರಿ ಅವರ ಮನೆಗೆ ಶೌಚಾಲಯ ಮತ್ತು ಸ್ನಾನದ ಕೊಠಡಿ ನಿರ್ಮಾಣ ಮಾಡಿಕೊಡಲಾಗಿದೆ. ಕಷ್ಟಕರ ಜೀವನ ಸಾಗಿಸುತ್ತಿದ್ದ ಈ ಕುಟುಂಬಕ್ಕೆ  ಶೌಚಾಲಯದ ಅವಶ್ಯಕತೆ ಇರುವುದನ್ನು ಮನಗಂಡ ಉಡುಪಿ ಗ್ರಾಮಾಂತರ ಬಿಜೆಪಿಯ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಅವರ ನೇತೃತ್ವದಲ್ಲಿ ಬಿಜೆಪಿ ದಾನಿಗಳು ಹಾಗೂ ಚಾಂತಾರು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ  ಶೌಚಾಲಯವನ್ನು ನಿರ್ಮಿಸಿ ಕೊಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ವಿ. ನಾಯ್ಕ್, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಉಪಾಧ್ಯಕ್ಷೆ ಲಕ್ಷ್ಮೀ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ ನಾಯ್ಕ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಜು ಪೂಜಾರಿ, ಬಿರ್ತಿ ರಾಜೇಶ್ ಶೆಟ್ಟಿ, ಅಶೋಕ್ ಹೇರೂರು, ಎಸ್ ನಾರಾಯಣ್, ಅರುಣ್ ಭಂಡಾರಿ, ಮಂಜುನಾಥ,  ಚಂದ್ರಶೇಖರ ಬೈಕಾಡಿ ಮತ್ತು ಸಚಿನ್ ಪೂಜಾರಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!