ತಕ್ಷಣ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ’: ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ.

ದೇಶದಲ್ಲಿ ಕೊರೋನಾ ಇದೆಯೇ ಎಂದು ಸಂಶಯಪಡುವ ರೀತಿಯಲ್ಲಿ ಬೀದಿಗಿಳಿದು ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಸಂಭ್ರಮಾಚರಣೆ ಮಾಡುವ ಹಾಗಿಲ್ಲ ಎಂದು ಹೇಳಿದ್ದರೂ ಜನ ಕ್ಯಾರೇ ಮಾಡುತ್ತಿಲ್ಲ.

ಇಂದು ತಮ್ಮ ಬೆಂಬಲಿತ ಪಕ್ಷಗಳು ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಗೊತ್ತಾಗುತ್ತಿದ್ದಂತೆ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡವರನ್ನು ತರಾಟೆಗೆ ತೆಗೆದುಕೊಂಡಿರುವ ಚುನಾವಣಾ ಆಯೋಗ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

Leave a Reply

Your email address will not be published. Required fields are marked *

error: Content is protected !!