ಹೆಬ್ರಿ: ಕ್ರಶರ್ ನಲ್ಲಿ ದಲಿತ ಮಹಿಳೆಯ ಅತ್ಯಾಚಾರ- ಚಾಲಕನ ಬಂಧನ

ಹೆಬ್ರಿ ಮೇ.8 (ಉಡುಪಿ ಟೈಮ್ಸ್ ವರದಿ): ಸ್ಥಳೀಯರ ಎಚ್ಚರಿಕೆಯ ಬಳಿಕ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.6 ರಂದು ನಡೆದಿದ್ದ ದಲಿತ ಮಹಿಳೆಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಹೆಬ್ರಿ ಠಾಣಾ ವ್ಯಾಪ್ತಿಯ ಶಿವಪುರದ ಯಳಗೋಳಿಯ ಮಹಾಲಕ್ಷ್ಮಿ ಕ್ರಶರ್ ನ ವಾಹನ ಚಾಲಕ ಸಣ್ಣಪ್ಪ ಪ್ರಕರಣದ ಬಂಧಿತ ಆರೋಪಿ.

ಘಟನೆಗೆ ಸಂಬಂಧಿಸಿ ಕೇಸು ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ಸ್ಥಳೀಯ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಳಿಕ ಇದೀಗ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಕ್ರಶರ್ ಮಾಲಕ ಆರೋಪಿಯನ್ನು ರಕ್ಷಿಸುವ ಸಲುವಾಗಿ ರಾಜಕೀಯ ಪ್ರಭಾವ ಬೀರುತ್ತಿದ್ದಾರೆ ಎಂಬ ಆರೋಪ ಕೂಡಾ ಸ್ಥಳೀಯ ವಲಯದಿಂದ ಕೇಳಿ ಬಂದಿದೆ.

ಅಲ್ಲದೆ ಕ್ರಶರ್ ಮಾಲಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸುವಲ್ಲಿ ಪೊಲೀಸರು ವಿಳಂಬ ಮಾಡಿದ್ದಲ್ಲದೆ ಘಟನೆ ನಡೆದು 2 ದಿನಗಳು ಕಳೆದರೂ ಪೊಲೀಸರು ಯಾವುದೇ ರೀತಿಯ ಮಾಹಿತಿ ನೀಡಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿದೆ.

ಸಂಘಟನೆಯ ಎಚ್ಚರಿಕೆ ಬಳಿಕ ಶನಿವಾರ ಆರೋಪಿಯನ್ನು ವಶಕ್ಕೆ ಪಡೆದು ಸ್ಥಳ ಮಹಜರುಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!