ಮಣಿಪಾಲ: ಕೀಟನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಮಣಿಪಾಲ,ಮೇ.8(ಉಡುಪಿ ಟೈಮ್ಸ್ ವರದಿ): ಕೀಟನಾಶಕ ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಶಾಂತರಾಮ ಪ್ರಭು ಮೃತಪಟ್ಟವರು. ಇವರು ವೀಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು ಪ್ರತಿ ದಿನ ಮದ್ಯಪಾನ ಸೇವಿಸಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು.

ಮೇ. 6 ರಂದು ಬೆಳಿಗ್ಗೆ 8.30 ರ ಸುಮಾರಿಗೆ ಶಾಂತರಾಮ ಪ್ರಭು ಅವರು ವಾಂತಿ ಮಾಡಲು ಶುರು ಮಾಡಿಕೊಂಡಿದ್ದು, ಈ ಬಗ್ಗೆ ಕೇಳಿದಾಗ ಅವರು ತಾನು ಗಿಡಗಳಿಗೆ ಹಾಕುವ ಕೀಟ ನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದರು. ಈ ವೇಳೆ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!