ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಲು ಆದೇಶ

ಬೆಂಗಳೂರು: ರಾಜ್ಯದಲ್ಲಿ ದಿನ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಕಾರಣ ಉಂತಾದ ಸಂಕಟದ ಪರಿಸ್ಥಿತಿಯಲ್ಲಿ ರಾಜ್ಯ ಸಂಪುಟ ದರ್ಜೆಯ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ 19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸ ಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಲ್ಲದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರ ಈ ನಿಟ್ಟಿನಲ್ಲಿ ಸೂಚನೆ ನೀಡಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಸೂಚನೆಯಂತೆ, ರಾಜ್ಯದ ಎಲ್ಲಾ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಲು ಸರ್ಕಾರದ ಆದೇಶ ಹೊರಡಿಸಲಾಗಿದೆ. ಎಂದು ಮುಖ್ಯಮಂತ್ರಿ ಅವರ ಕಚೇರಿ ಹೇಳಿದೆ.

Leave a Reply

Your email address will not be published. Required fields are marked *

error: Content is protected !!