ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ, ಈ ಹಣಕ್ಕಾಗಿಯೇ ಕಿತ್ತಾಟ ಶುರು- ಕಾಂಗ್ರೆಸ್ ಟ್ವಿಟ್

ಬೆಂಗಳೂರು: ಕೊರೋನಾ ಕಾಲಘಟ್ಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭರಪೂರ ಲೂಟಿಗೆ ಬಳಸಿಕೊಳ್ಳುತ್ತಿವೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

‘ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ,ಈ ಹೆಣದ ಮೇಲಿನ ಹಣಕ್ಕಾಗಿಯೇ ಬಿಜೆಪಿಯಲ್ಲಿ ಕಿತ್ತಾಟ ಶುರುವಾಗಿರುವುದು, ಪಿಎಂ ಕೇರ್ಸ್‌ನಿಂದ ಹಿಡಿದು ಔಷಧ ಕಾಳಸಂತೆ, ಲಸಿಕೆ ಬ್ಲಾಕಿಂಗ್‌ವರೆಗೂ ಇವರ ಬಾಚಿ ತಿನ್ನುವ ಕೈಗಳು ಚಾಚಿವೆ ಎಂದು ಅಪಾದಿಸಿದೆ.

ಆರೋಗ್ಯ ತುರ್ತು ಪರಿಸ್ಥಿತಿಯನ್ನು ರಾಜ್ಯ ಬಿಜೆಪಿ ನಾಯಕರು ಹಣ ದೋಚಲು ಬಳಸಿಕೊಳ್ಳುತ್ತಿರುವುದು ಅತ್ಯಂತ ನೀಚ ಹಾಗೂ ಅಮಾನವೀಯ. ಕೇಂದ್ರದ ಲಸಿಕೆ ಅನ್ಯಾಯದ ವಿರುದ್ಧ ತುಟಿ ಬಿಚ್ಚದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ತೇಜಸ್ವಿ ಹಾಗೂ ರವಿ ಸುಬ್ರಮಣ್ಯ ಬಡವರ ವ್ಯಾಕ್ಸಿನ್ ಕಳ್ಳತನ ಮಾಡಿದ್ದರ ಬಗ್ಗೆ ಇನ್ನೂ ತನಿಖೆ ಏಕಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Leave a Reply

Your email address will not be published. Required fields are marked *

error: Content is protected !!