ಬಾಬಾ ರಾಮದೇವ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಬಿಹಾರ ನ್ಯಾಯಾಲಯಕ್ಕೆ ಅರ್ಜಿ

ಪಾಟ್ನಾ ,ಜೂ.3: ಅಲೋಪತಿ ವೈದ್ಯವಿಜ್ಞಾನ ಮತ್ತು ವೈದ್ಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿರುವ ಯೋಗ ಗುರು ಬಾಬಾ ರಾಮದೇವ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸುವಂತೆ ಬಿಹಾರದ  ಮುಝಫ್ಫರಪುರ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ ಎಂಬ ಸುದ್ದಿಯೊಂದು ವರದಿಯಾಗಿದೆ.  

ಈ ಬಗ್ಗೆ ಖಾಸಗಿ ಮಾಧ್ಯಮವೊಂದು ವರದಿ ಮಾಡಿದ್ದು, ಹಿರಿಯ ರಾಜಕಾರಣಿಗಳು, ಬಾಲಿವುಡ್ ತಾರೆಯರು ಮತ್ತು ವಿದೇಶಿ ನಾಯಕರ ವಿರುದ್ಧ ನ್ಯಾಯಾಲಯಗಳಲ್ಲಿ ಅರ್ಜಿಗಳನ್ನು ಸಲ್ಲಿಸುವ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುವ ಮುಝಫ್ಫರಪುರ ನಿವಾಸಿ ಜ್ಞಾನಪ್ರಕಾಶ ತನ್ನ ವಕೀಲ ಸುಧೀರಕುಮಾರ ಓಝಾ ಮೂಲಕ ಈ ಅರ್ಜಿಯನ್ನು ಸಿಜೆಎಂ ನ್ಯಾಯಾಲಯದಲ್ಲಿ ಸಲ್ಲಿಸಿದ್ದಾರೆ.

ತಮ್ಮ ಅರ್ಜಿಯಲ್ಲಿ ರಾಮ್ ದೇವ್ ಹೇಳಿಕೆಗಳು ಕುಟಿಲತನದಿಂದ ಕೂಡಿವೆ. ದೇಶದ್ರೋಹ ಮತ್ತು ವಂಚನೆಗೆ ಸಂಬಂಧಿಸಿದ ಐಪಿಸಿ ಕಲಮ್ ಗಳನ್ನು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯನ್ನು ಅವರ ವಿರುದ್ಧ ಹೇರುವಂತೆ ಕೋರಿದ್ದಾರೆ. ಈ ನಡುವೆ ಇವರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂ.7ಕ್ಕೆ ನಿಗದಿಗೊಳಿಸಿದೆ ಎಂದು ಮಾಧ್ಯಮ ವರದಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!