ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ? ಬಡವರು, ಜನ ಸಾಮಾನ್ಯರು ಜೀವನ ನಡೆಸುವುದು ಹೇಗೆ?: ಡಿಕೆಶಿ

ಚಿತ್ರದುರ್ಗ: ಹಿಂದೆ ಬಿಜೆಪಿ ಮಾಡಿದ ಪ್ರತಿಭಟನೆಯನ್ನು ಈಗ ನಾವು ಮಾಡುತ್ತಿದ್ದೇವೆ ಇದು ಬಿಜೆಪಿಯವರೇ ಕಲಿಸಿದ ಪಾಠ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. 

ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಕೈಗೊಂಡಿರುವ 100 ನಾಟ್ ಔಟ್ ಆಂದೋಲನದ ಅಂಗವಾಗಿ ಚಿತ್ರದುರ್ಗದ ಹಿರಿಯೂರು ತಾಲೂಕು ಕೇಂದ್ರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗ ವಹಿಸಿ ಮಾತನಾಡಿದ ಅವರು, ಅಂದು ಬಿಜೆಪಿಯವರು ಪೆಟ್ರೋಲ್ ಬೆಲೆ 52 ರೂ. ತಲುಪಿದಾಗ ದೊಡ್ಡ ಹೋರಾಟ ಮಾಡಿದ್ದರು. ಈಗ ಪೆಟ್ರೋಲ್ ಮೇಲೆ 62 ರೂ. ತೆರಿಗೆ ವಿಧಿಸಲಾಗಿದೆ. ಇದೊಂದೇ ವರ್ಷ ತಿಂಗಳಿಗೆ ಸರಾಸರಿ

18 ಬಾರಿಯಂತೆ ಬೆಲೆ ಹೆಚ್ಚಿಸಲಾಗಿದೆ. ಈಗ ಪೆಟ್ರೋಲ್ ಬೆಲೆ 100 ರೂ. ಆಗಿದೆ. ಇದಕ್ಕಾಗಿ ಹಲವೆಡೆ ಸಿಹಿ ಹಂಚಿ ಸಂಭ್ರಮಿಸುತ್ತಿ ದ್ದಾರೆ. ಇನ್ನು ಕೆಲವೆಡೆ ತಮಟೆ, ಜಾಗಟೆ ಹೊಡೆದು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರೇ ಇದನ್ನೆಲ್ಲ ನಮಗೆ ಹೇಳಿಕೊಟ್ಟಿ ದ್ದು ಎಂದರು ವ್ಯಂಗ್ಯ ವಾಡಿದ್ದಾರೆ.

ಅಲ್ಲದೆ ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಬಾರಿ ಹೆಚ್ಚಳ ಮಾಡಿದ್ದೀರಲ್ಲಾ, ರೈತರ ಬೆಂಬಲ ಬೆಲೆ ಎಷ್ಟು ಬಾರಿ ಹೆಚ್ಚಿಸಿದ್ದೀರಿ? ರೈತನ ಎಲ್ಲ ಬೆಳೆಯ ಬೆಲೆಯನ್ನು ಎಷ್ಟು ಬಾರಿ ಹೆಚ್ಚಿಸಿದ್ದೀರಿ? ದಿನಗೂಲಿ, ಖಾಸಗಿ ಕಾರ್ಮಿಕರು, ನೌಕರರು, ನರೇಗಾ ಕಾರ್ಮಿಕರ ವೇತನ ಎಷ್ಟು ಬಾರೀ ಹೆಚ್ಚಿಸಿದ್ದೀರಿ? ಎಂದು ಯಡಿಯೂರಪ್ಪ ಹಾಗೂ ಮೋದಿ ಅವರನ್ನು ಕೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ? ಬಡವರು, ಜನ ಸಾಮಾನ್ಯರು ಜೀವನ ನಡೆಸುವುದು ಹೇಗೆ? ಅವರ ಪರಿಸ್ಥಿತಿ ಏನಾಗಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!