ರಾಮಾಯಣ ಸೀರಿಯಲ್ ಖ್ಯಾತಿಯ ಬಾಲಿವುಡ್ ನ ಹಿರಿಯ ನಟ ಚಂದ್ರಶೇಖರ್ ನಿಧನ

ಮುಂಬೈ ಜೂ.16: ರಾಮಾಯಣ ಸೀರಿಯಲ್ ಖ್ಯಾತಿಯ ಬಾಲಿವುಡ್ ನ ಹಿರಿಯ ನಟ ಚಂದ್ರಶೇಖರ್(92)ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂದ್ರಶೇಖರ್‌ರವರು ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. 

ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಇವರು,1954ರಲ್ಲಿ ವಿ ಶಾಂತಾರಾಮ್ ನಿರ್ದೇಶಿಸಿದ್ದ ಔರತ್ ಥೇರಿ ಯೆಹಿ ಕಹಾನಿ ಸಿನಿಮಾದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.1987ರಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರಾವಾಹಿಯಲ್ಲಿ ದಶರಥ ಮಹಾರಾಜನ ಮಂತ್ರಿ ಸುಮಂತನ ಪಾತ್ರದಲ್ಲಿ ಅಭಿನಯಿಸಿದ್ದರು. ಇವರು ಈವರೆಗೂ ಸುಮಾರು 250 ಸಿನಿಮಾಗಳಲ್ಲಿ ಅಭಿನಯಿಸಿದ್ದರು. 1950ರ ದಶಕದ ಖ್ಯಾತ ನಟರಾಗಿದ್ದ ಚಂದ್ರಶೇಖರ್‌ರವರು ಕಾಳಿ ಟೋಪಿ ಲಾಲ್ ರುಮಾಲ್, ಬಾರದಾರಿ, ಸ್ಟ್ರೀಟ್ ಸಿಂಗರ್, ರುಸ್ತೋಮ್ ಇ ಬಾಗ್ದಾದ್ ಸಿನಿಮಾಗಳಲ್ಲಿ ಅಭಿನಯಿಸಿದ್ದರು.ಇವರು 1964ರಲ್ಲಿ ಚಾಚಾಚಾ ಎಂಬ ಮ್ಯೂಸಿಕಲ್ ಸಿನಿಮಾವನ್ನು ನಿರ್ದೇಶಿಸಿದ್ದರು. 1985-1996ರವರೆಗೆ ಸಿನಿ ಮತ್ತು ಕಲಾವಿದರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!