ಸೋಂಕನ್ನು ತಡೆಗಟ್ಟುವ ಹೆಸರಿನಲ್ಲಿ ಬಿಜೆಪಿ ಸರ್ಕಾರ ಕೋಟ್ಯಂತರ ರೂಪಾಯಿ ವಂಚಿಸಿದೆ: ಡಿ.ಕೆ ಸುರೇಶ್

ಹಾಸನ: ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರ ಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಹೇಳಿದ್ದಾರೆ.

ಹಾಸನದಲ್ಲಿ ನಿನ್ನೆ ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ರೈತರು ಮತ್ತು ಬಡವರ ಪರ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ. ಲಾಕ್ ಡೌನ್ ನಿಂದಾಗಿ ಮಧ್ಯಮ, ಕೆಳ ಮಧ್ಯಮ ಮತ್ತು ಬಡವರಿಗೆ ತುಂಬಾ ಕಷ್ಟವಾಗಿದೆ ಎಂದು ಹೇಳಿದರು.

ಪಕ್ಷದ ನಾಯಕತ್ವ ವಿವಾದವನ್ನು ಬಗೆಹರಿಸಲು ಮಾತ್ರ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ದ್ದಾರೆಯೇ ಹೊರತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಅಲ್ಲ. ಇದು ರಾಜ್ಯದ ಬಗ್ಗೆ ಬಿಜೆಪಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ. ಕೊರೋನಾ ಸೋಂಕನ್ನು ತಡೆಗಟ್ಟುವ ಹೆಸರಿನಲ್ಲಿ ಬಿಜೆಪಿ ಸರ್ಕಾರ ಕೋಟ್ಯಂತರ ರೂಪಾಯಿ ವಂಚಿಸಿದೆ ಎಂದು ಕೂಡ ಡಿ ಕೆ ಸುರೇಶ್ ಆರೋಪಿಸಿದರು

Leave a Reply

Your email address will not be published. Required fields are marked *

error: Content is protected !!