ಉಡುಪಿ ಶ್ರೀಕೃಷ್ಣ ಮಠ: ಭಕ್ತರಿಗೆ ದರ್ಶನಕ್ಕೆ ಅವಕಾಶವಿಲ್ಲ ಪರ್ಯಾಯಶ್ರೀ

ಉಡುಪಿ, ಜು 04: ಜುಲೈ 5ರಿಂದ ಅನ್‌‌‌ಲಾಕ್‌‌ 3.0 ಜಾರಿಗೆ ಬರಲಿದ್ದು, ದೇವಾಲಯ ಸೇರಿದಂತೆ ಎಲ್ಲ ಚಟುವಟಿಕೆಗಳಿಗೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಹಿನ್ನೆಲೆ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಸಿದ್ದತೆ ನಡೆಸಲಾಗಿದೆ. ಆದರೆ, ಉಡುಪಿಯ ಶ್ರೀಕೃಷ್ಣನ ದರ್ಶನಕ್ಕೆ ಮಾತ್ರ ಅವಕಾಶವಿಲ್ಲ.

ಸರಕಾರ ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಿ ದೇವರ ದರ್ಶನಕ್ಕೆ ಅವಕಾಶ ಮಾಡಿದ್ದಾರೆ. ಆದರೆ, ಕೃಷ್ಣ ಮಠದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶವಿಲ್ಲ. ಒಂದು ವಾರದ ಬಳಿಕ ಅವಕಾಶ ನೀಡಲು ತೀರ್ಮಾನಿಸಲಾಗುವುದು ಎಂದು ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರಿಪಾದರು ತಿಳಿಸಿದ್ದಾರೆ.”ಈ ಬಗ್ಗೆ ಒಂದು ವಾರದ ನಂತರ ಮಠದಿಂದ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಪರಿಸರದ ಹಾಗೂ ಹತ್ತಿರದ ರಾಜ್ಯಗಳ ಕೊರೊನಾ ಪರಿಸ್ಥಿತಿಯನ್ನು ನೋಡಿ ತೀರ್ಮಾನಿಸಲಾಗುವುದು” ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!