ಶಂಕರನಾರಾಯಣ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
ಶಂಕರನಾರಾಯಣ ಜು.5 (ಉಡುಪಿ ಟೈಮ್ಸ್ ವರದಿ): ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಅಲ್ಬಾಡಿ ಗ್ರಾಮದ ಹಾಡಿಯೊಂದರಲ್ಲಿ ನಡೆದಿದೆ.
ಈಶ್ವರ ನಾಯ್ಕ (30) ಆತ್ಮಹತ್ಯೆ ಮಾಡಿಕೊಂಡವರು. ಇವರು ಜು.3 ರಂದು ಅಲ್ಬಾಡಿ ಆಟೋರಿಕ್ಷಾ ನಿಲ್ದಾಣಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದವರು ಸಂಜೆ ಆದರು ಮನೆಗೆ ಬಾರದೇ ಇದ್ದಾಗ ಮನೆಯವರು ಎಲ್ಲಾ ಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲಿಯೂ ಅವರ ಸುಳಿವು ಸಿಕ್ಕಿರುವುದಿಲ್ಲ. ಬಳಿಕ ಜು.4 ರಂದು ಬೆಳಿಗ್ಗೆ ಇವರನ್ನು ಹುಡುಕುತ್ತಿದ್ದಾಗ ಹೆಬ್ರಿ ತಾಲೂಕಿನ ಅಲ್ಬಾಡಿ ಗ್ರಾಮದ ಹಾಡಿಯಲ್ಲಿ ಆಟೋರಿಕ್ಷಾ ದೊಳಗೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವನೆ ಮಾಡಿ ಮೃತಪಟ್ಟಿರುವುದಾಗಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ