ಮಣಿಪಾಲ: ನಗರ ಬಿಜೆಪಿ ನೇತೃತ್ವದಲ್ಲಿ ಜು.6 ರಂದು ಸಸ್ಯೋತ್ಸವ ಕಾರ್ಯಕ್ರಮ

ಉಡುಪಿ ಜು.5 (ಉಡುಪಿ ಟೈಮ್ಸ್ ವರದಿ): ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅವರ ನೇತೃತ್ವದಲ್ಲಿ ಜು.6 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಸ್ಯೋತ್ಸವ ಕಾರ್ಯಕ್ರಮ ಮಣಿಪಾಲದ ಈಶ್ವರ ನಗರದಲ್ಲಿ ನಡೆಯಲಿದೆ.

ಪಕ್ಷದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ಪಕ್ಷದ ವತಿಯಿಂದ ಹಮ್ಮಿಕೊಂಡ ವೃಕ್ಷಾರೋಪಣ ಕಾರ್ಯಕ್ರಮದ ಅಂಗವಾಗಿ ಉಚಿತ ಸಸಿಗಳ ವಿತರಣಾ ಮೇಳ ಸಸ್ಯೋತ್ಸವವನ್ನು ಬೃಹತ್ & ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆಯ ಸಚಿವ ಜಗದೀಶ್ ಶೆಟ್ಟರ್ ಅವರು ಉದ್ಘಾಟಿಸಲಿದ್ದಾರೆ.

ಈ ಮೇಳದಲ್ಲಿ ಎಲ್ಲಾ ಪ್ರಕಾರದ ಹೂವಿನ ಗಿಡಗಳು, ಕಸಿ ಮಾವಿನ ಗಿಡಗಳು, ಚಿಕ್ಕು, ಪೇರಳೆ, ಲಕ್ಷ್ಮಣ ಫಲ, ರಂಬುಟನ್, ಲಿಂಬೆ, ಕರಿಬೇವು, ಅಡಿಕೆ, ತೆಂಗು, ಜಾಂಬು, ಕಾಳು ಮೆಣಸು, ಮಜ್ಜಿಗೆ ಹುಲ್ಲು, ಇದರೊಂದಿಗೆ ಅರಣ್ಯ ಸಂಪತ್ತುಗಳಾದ ಸಾಗುವಾನಿ, ಶ್ರೀಗಂಧ, ರಕ್ತಚಂದನ, ಬಿಲ್ವಪತ್ರೆ, ಮುಂತಾದ ಗಿಡಗಳನ್ನು ‌ಉಚಿತವಾಗಿ ವಿತರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತಿದೆ. ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!