ಪಕ್ಷ ಅಧಿಕಾರದಲ್ಲಿ ಇರದಿದ್ದರೂ ಕಾರ್ಯಕರ್ತರ ಸೇವೆ ಸಂತೋಷ ತಂದಿದೆ – ಡಿಕೆ ಶಿವಕುಮಾರ್

ಉಡುಪಿ ಜು.6(ಉಡುಪಿ ಟೈಮ್ಸ್ ವರದಿ):ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ವಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಕೆಶಿ ಅಭಿಮಾನಿ ಬಳಗ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ವತಿಯಿಂದ 1000 ಬಡಕುಟುಂಬಗಳಿಗೆ ಆಹಾರ ಕಿಟ್ ವಿತರಣಾ ಸಮಾರಂಭ ಉಡುಪಿಯ ಮಥುರ ಕಂಫರ್ಟ್ಸ್ ನಲ್ಲಿ ಇಂದು ನಡೆಯಿತು.

ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಮಾತನಾಡಿ, ಚುನಾವಣೆಯಲ್ಲಿ ಪಕ್ಷ ಸೋತಿದ್ದರೂ, ಅಧಿಕಾರದಲ್ಲಿ ಇರದಿದ್ದರೂ  ಪಕ್ಷದ ಕಾರ್ಯಕರ್ತರು ಜನರಿಗೆ ಸೇವೆ ಮಾಡುತ್ತಾ ಬಂದಿದ್ದಾರೆ. ಜನರಿಗೆ ಸಹಾಯ ಮಾಡಲು ಹೊರಟಿರುವುದು ನಿಜವಾಗಿಯೂ ಬಹಳ  ಸಂತೋಷ ತಂದಿದೆ ಎಂದರು. 

ಕಾರ್ಯಕರ್ತರ ಕಾರ್ಯಕ್ಕೆ ಶುಭ ಹಾರೈಸಿದ ಅವರು,‌ ಕೊರೋನಾ ಸಂದರ್ಭದಲ್ಲಿ ಯಾರ್ಯಾರಿಗೆ ಅನ್ಯಾಯವಾಗಿದೆ, ಯಾರು ಅಸಂಘಟಿತ ಕಾರ್ಮಿಕರಿದ್ದಾರೆ, ಅವರಿಗೆಲ್ಲಾ ಸರಕಾರ ಪರಿಹಾರ ನೀಡುವ ಕಾರ್ಯ ಆಗಬೇಕು. ಕೋವಿಡ್ ನಿಂದ ಪ್ರಾಣ ಕಳೆದು ಕೊಂಡವರ ಮನೆಯವರಿಗೆ ಪ್ರಮಾಣ ಪತ್ರ ಕೊಡಿಸಿ ಪರಿಹಾರ ಕೊಡಿಸುವ ಮೂಲಕ ನ್ಯಾಯ ಕೊಡಿಸುವ ಕೆಲಸವನ್ನು ಮಾಡಿದ್ದೇವೆ.

ನಮ್ಮ ಹೋರಾಟವನ್ನು ಮುಂದುವರೆಸಬೇಕು. ಕೊರೋನಾ ಸಂಕಷ್ಟದಿಂದ ನೊಂದವರಿಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯ ಸಿಗುವಂತೆ ಮಾಡಬೇಕು, ಲಸಿಕೆ ಕೊಡಿಸಬೇಕು ಈ ನಿಟ್ಟಿನಲ್ಲಿ ಸಂಘಟನೆಯ ಕಾರ್ಯಕರ್ತರು ಕಾರ್ಯಪ್ರವೃತ್ತರಾಗುತ್ತಾರೆ ಎಂದು ನಂಬಿದ್ದೇನೆ ಎಂದರು. ಇದೇ ವೇಳೆ ಇನ್ನೂ ಅನೇಕ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ ನಿಮ್ಮೆಲ್ಲರ ಸಹಕಾರ ,ವಿಶ್ವಾಸ ಹೀಗೆ ಇರಲಿ ಎಂದು ಕೇಳಿಕೊಂಡವರು.

ಕಾರ್ಯಕ್ರಮದಲ್ಲಿ ಅನೇಕರಿಗೆ ಸಾಂಕೇತಿಕವಾಗಿ ಆಹಾರದ ಕಿಟ್ ವಿತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!