ಡಿಕೆಶಿ ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ: ಮೀನುಗಾರರಿಗೆ ಆಶ್ವಾಸನೆ ನೀಡಿದ ನಲಪಾಡ್
ಉಡುಪಿ,ಜು.7(ಉಡುಪಿ ಟೈಮ್ಸ್ ವರದಿ): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾಗುತ್ತಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದ್ದಾರೆ.
ಉಡುಪಿಯಲ್ಲಿ ನಿನ್ನೆ ಮೀನುಗಾರರೊಂದಿಗೆ ಮಾತನಾಡುತ್ತಾ ಮುಂದಿನ ಸಿಎಂ ವಿಚಾರ ಪ್ರಸ್ತಾಪಿಸಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತದೆ. ಎಲ್ಲರೂ ಮತ ಹಾಕಿದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗ್ತಾರೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದರು.
ಮೀನುಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮಗೆಲ್ಲಾ ಡಿ ಕೆ ಶಿವಕುಮಾರ್ ಅವರು ಸಹಾಯ ಮಾಡುತ್ತಾರೆ, ಅದಕ್ಕೆ ನೀವು ಮಾಡಬೇಕಾಗಿರುವುದು ಕಾಂಗ್ರೆಸ್ ನ್ನು ಬೆಂಬಲಿಸುವುದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಆಗ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ, ನಿಮಗೆ ಸಹಾಯ ಮಾಡುತ್ತಾರೆ ಎಂದರು. ಇದಕ್ಕೆ ಸಿದ್ದರಾಮಯ್ಯ ಬಣ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂದು ಕಾದು ನೋಡಬೇಕಿದೆ.