ಖಾಸಗಿ ಬಸ್ ಚಾಲಕನ ಸಮಯ ಪ್ರಜ್ಞೆ-ತಪ್ಪಿದ ಅನಾಹುತ

ದ.ಕ ಜು.22(ಉಡುಪಿ ಟೈಮ್ಸ್ ವರದಿ): ಬಸ್ ಚಲಾಯಿಸುತ್ತಿರುವಾಗಲೇ ಚಾಲಕ ಕುಸಿದು ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ
ಮಂಗಳೂರಿನ  ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.

ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಸಾಂಭವ್ಯ ಅನಾಹುತ ತಪ್ಪಿದ್ದು, ಬಸ್‍ನಲ್ಲಿ ಇದ್ದ ಪ್ರಯಾಣಿಕರೆಲ್ಲ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಪುತ್ತೂರು ಮೂಲದ ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಖಾಸಗಿ ಬಸ್, ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್ ಕಡೆಗೆ ಹೊರಟಿತ್ತು. ಈ ವೇಳೆ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ರಕ್ತದೊತ್ತಡ ಕಡಿಮೆಯಾದ ಕಾರಣ ಕಣ್ಣು ಮಂಜಾಗಿದೆ. ತಕ್ಷಣ ಎಚ್ಚೆತ್ತ ಬಸ್ ಚಾಲಕ ಬ್ರೇಕ್ ಹಾಕಿ ಬಸ್ ನಿಲ್ಲಿಸಿದ್ದಾರೆ. ಅಲ್ಲದೆ ತಾನೂ ಸ್ಟೇರಿಂಗ್ ಮೇಲೆ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಮತ್ತು ಇತರೇ ಪ್ರಯಾಣಿಕರು ಸೇರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸ್‍ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದ ಕಾರಣ, ಚಾಲಕ ಎಚ್ಚೆತ್ತುಕೊಳ್ಳದಿರುತ್ತಿದ್ದರೆ ಭಾರೀ ದೊಡ್ಡ ಅನಾಹುತ ಸಂಭಿವಿಸುತ್ತಿತ್ತು. ಇದೀಗ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!