ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದರೆ ಏನೂ ನಷ್ಟವಿಲ್ಲ-ಸಿದ್ದರಾಮಯ್ಯ

ಬೆಂಗಳೂರು ಜು.22 : ಸಿಎಂ ಸ್ಥಾನದಿಂದ ಬಿಎಸ್ ಯಡಿಯೂರಪ್ಪನವರು ನಿರ್ಗಮಿಸಿದರೆ ಏನೂ ನಷ್ಟವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಬಿ ಎಸ್ ಯಡಿಯೂರಪ್ಪನವರು ಕರ್ನಾಟಕದಲ್ಲಿ ಕೆಟ್ಟ ಸರ್ಕಾರವನ್ನು ಕೊಟ್ಟಿದ್ದಾರೆ, ಅಭಿವೃದ್ಧಿಪರ ಇಲ್ಲದಿರುವ ಭ್ರಷ್ಟಾತಾರದಲ್ಲಿ ಕೂಡಿರುವ ಅದಕ್ಷ ಸರ್ಕಾರವನ್ನು ಕರ್ನಾಟಕದಲ್ಲಿ ನೀಡಿದರು, ಹೀಗಾಗಿ ಸಿಎಂ ಸ್ಥಾನದಿಂದ ಯಡಿಯೂರಪ್ಪನವರು ಕೆಳಗಿಳಿದರೆ ಏನೂ ನಷ್ಟವಿಲ್ಲ ಎಂದು ಹೇಳಿದ್ದಾರೆ.

ಈ ವೇಳೆ, ಬಿಎಸ್ ಯಡಿಯೂರಪ್ಪನವರು ಸಿಎಂ ಹುದ್ದೆಯಿಂದ ಕೆಳಗಿಳಿದರೆ ಬಹಳ ಒಳ್ಳೆಯದು ಎಂದ ಅವರು, ಯಡಿಯೂರಪ್ಪನವರನ್ನು ತೆಗೆಯುವುದರಿಂದ ಬಿಜೆಪಿಯಲ್ಲಿ ಮತ್ತೊಬ್ಬ ಪ್ರಾಮಾಣಿಕ ಮುಖ್ಯಮಂತ್ರಿ ಬರುತ್ತಾರೆ ಎಂದು ನಾನು ಅಂದುಕೊಂಡಿಲ್ಲ. ಯಾಕೆಂದರೆ ಬಿಜೆಪಿಯೇ ಒಂದು ಭ್ರಷ್ಟ ಪಕ್ಷ , ಅದರಲ್ಲಿರುವ ಸಚಿವರುಗಳೂ ಭ್ರಷ್ಟರು ಎಂದು ಟೀಕಿಸಿದ್ದಾರೆ.

ಇನ್ನು ನನಗೆ ಖಚಿತ ಮಾಹಿತಿ ಇತ್ತು, ನಾನು ಸುಮಾರು ಆರೇಳು ತಿಂಗಳಿನಿಂದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ತೆಗೆಯುತ್ತಾರೆ ಎಂದು ಹೇಳುತ್ತಾ ಬಂದಿದ್ದೆ. ಅದನ್ನು ಯಾರೂ ನಂಬಿರಲಿಲ್ಲ. ಇವತ್ತು ಅದು ಸತ್ಯವಾಗಿದೆ ಎಂದು ಇದೇ ವೇಳೆ ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!