ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಚೇರಿ ಉದ್ಘಾಟನೆ

ಉಡುಪಿ ಜು.22(ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಕಚೇರಿ ಜು.21 ರಂದು ಉದ್ಘಾಟನೆಗೊಂಡಿತು. ನೂತನ ಕಚೇರಿಯನ್ನು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಅಧ್ಯಕ್ಷ ಡಾ ತಲ್ಲೂರು ಶಿವರಾಮ ಶೆಟ್ಟಿ ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಉಡುಪಿ ಜಿಲ್ಲಾಧ್ಯಕ್ಷರ ಸುಜಯ ಪೂಜಾರಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ‌ ಗೌರವಾಧ್ಯಕ್ಷ ಡಾ. ನೇರಿ ಕರ್ನೆಲಿಯೋ,  ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್,‌ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೋಭಾ ಪೂಜಾರಿ, ಉಡುಪಿ ಜಿಲ್ಲಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಿಲ್ಲಾಧ್ಯಕ್ಷ ಸಿದ್ದಬಸವಯ್ಯ ಸ್ವಾಮಿ, ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಯ ಆಚಾರ್ಯ, ತೋಟಗಾರಿಕೆ ಇಲಾಖೆ ಅಧಿಕಾರಿ ಹೇಮಂತ್ ಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷ ಎಂಬಿ ದೇವರಾಜು, ಹೆಬ್ರಿ ತಾಲೂಕು ಅಧ್ಯಕ್ಷ ಸತೀಶ್ ಆಚಾರ್ಯ, ಸಲಹೆಗಾರ ಸುಧಾಕರ್ ಪೂಜಾರಿ, ಉಪಾಧ್ಯಕ್ಷ ಜಯರಾಮ್ ಪೂಜಾರಿ, ಉಡುಪಿ ಸಂಘಟನಾ ಕಾರ್ಯದರ್ಶಿ ಆಲ್ಫೋನ್ಸ್, ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಸಂತೋಷ್ ಪೂಜಾರಿ,ಕೋಶಾಧಿಕಾರಿ ಸುನಿಲ್ ಫರ್ನಾಂಡಿಸ್, ಕಾರ್ಯದರ್ಶಿ ನಾಗರಾಜ್ ಎಸ್ಎಲ್, ಉಪ ಸಂಘಟನಾ ಕಾರ್ಯದರ್ಶಿ ರೋಷನ್ ಡಿಸೋಜ ,ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ, ಮಹಿಳಾ ಘಟಕ ಕಾರ್ಯದರ್ಶಿ ಮುಕ್ತ ಪ್ರಿಯ, ಮಹಿಳಾ ಘಟಕದ ಉಪಾಧ್ಯಕ್ಷೆ ಪ್ರೇಮಲತಾ, ಉಪಕಾರ್ಯದರ್ಶಿ ನವೀನ ಸಂಸ್ಕೃತ ಅಧ್ಯಕ್ಷೆ ಮಮತಾ ಮತ್ತು ಸುಗುಣ, ಹೆಬ್ರಿ ತಾಲೂಕು ಘಟಕದ ಅಧ್ಯಕ್ಷೆ ಸುಲತ ಆಚಾರ್ಯ, ಹೆಬ್ರಿ ತಾಲೂಕು ಗೌರವಾಧ್ಯಕ್ಷ ಉದಯ ಶೇರಿಗಾರ್ ಮತ್ತು ಎಲ್ಲಾ ಕರವೇ ಸದಸ್ಯರು  ಉಪಸ್ಥಿತಿದ್ದರು.

Leave a Reply

Your email address will not be published. Required fields are marked *

error: Content is protected !!