ಉಡುಪಿ ಗ್ರಾಮಾಂತರ ಬಿಜೆಪಿ: ಗುರು ಪೂರ್ಣಿಮೆ – ಗುರು ವಂದನೆ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ಇದರ ವತಿಯಿಂದ ಗುರು ಪೂರ್ಣಿಮೆಯ ಪ್ರಯುಕ್ತ ಬ್ರಹ್ಮಾವರ ಸರಕಾರಿ ಪ್ರೌಡಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರು, ಅಜಪುರ ಕರ್ನಾಟಕ ಸಂಘದ ಸಕ್ರಿಯ ಸದಸ್ಯರಾದ ಶಂಕರ ನಾರಾಯಣ ಭಟ್ ಇವರಿಗೆ ಗುರುವಂದನೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಅಧ್ಯಕ್ಷರಾದ ವೀಣಾ ವಿ ನಾಯ್ಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮನೋಹರ ಕಲ್ಮಾಡಿ, ಕುತ್ಯಾರು ನವೀನ್ ಕುಮಾರ್, ಎಸ್.ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್ ಚೇರ್ಕಾಡಿ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಅಶೋಕ್ ಹೇರೂರು, ಪಕ್ಷದ ಪ್ರಮುಖರಾದ ರಘುಪತಿ ಬ್ರಹ್ಮಾವರ, ಶ್ರೀನಿವಾಸ ನಾಯಕ್, ಸಚಿನ್ ಪೂಜಾರಿ ಉಪಸ್ಥಿತರಿದ್ದರು.