ಆಸ್ಕರ್ ಫೆರ್ನಾಂಡಿಸ್ ಅವರ ಮೆದುಳಿನ ಶಸ್ತ್ರಚಿಕಿತ್ಸೆ ಯಶಸ್ವಿ-ಆರೋಗ್ಯ ಸ್ಥಿರ
ಉಡುಪಿ: (ಉಡುಪಿ ಟೈಮ್ಸ್ ವರದಿ) ಕಳೆದ ಎಂಟು ದಿನಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಮೆದುಳಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಡಾ.ಸುನಿಲ್ ಶೆಟ್ಟಿ, ಮತ್ತು ಡಾ. ದಿವಾಕರ್ ಅವರ ತಂಡ ನಡೆಸಿದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬಹಳಷ್ಟು ದೇವಾಲಯಗಳಲ್ಲಿ ಆಸ್ಕರ್ ಶೀಘ್ರ ಆರೋಗ್ಯ ಚೇತರಿಕೆಗಾಗಿ ಕಾಂಗ್ರೆಸ್ ಕಾರ್ಯಕರ್ತರು, ಆಸ್ಕರ್ ಅಭಿಮಾನಿಗಳು ಹಾಗೂ ಪಕ್ಷಾತೀತವಾಗಿ ಸಾರ್ವಜನಿಕರ ಪ್ರಾರ್ಥನೆ ಫಲ ನೀಡಿದೆ. ಹೆಪ್ಪುಗಟ್ಟಿದ ರಕ್ತವನ್ನು ತೆಗೆದು, ಯಶಸ್ವಿಯಾಗಿ ಶಸ್ತ್ರಕ್ರಿಯೆ ಮಾಡಲಾಗಿದೆ. ಇದು ಒಂದು ರೀತಿಯ ಪವಾಡ ಎಂದು ಆಸ್ಕರ್ ಆಪ್ತ ಎಂ ಎ ಗಫೂರ್ ತಿಳಿಸಿದ್ದಾರೆ.
ಪತ್ನಿ ಬ್ಲೋಸಂ ಫೆರ್ನಾಂಡಿಸ್ ಮತ್ತು ಮಕ್ಕಳು ಹಾಗೂ ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡರದ ದಿನೇಶ್ ಪುತ್ರನ್, ನರಸಿಂಹಮೂರ್ತಿ, ನಾಗೇಶ್ ಕುಮಾರ್ ಉದ್ಯಾವರ, ಅರವಿಂದ ಉಪೇಂದ್ರ ಮತ್ತು ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ ಉಪಸ್ಥಿತರಿದ್ದರು.