ಬಿಎಸ್ವೈ ಅಭಿಮಾನಿ ನೇಣಿಗೆ ಶರಣು
ಚಾಮರಾಜನಗರ: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ರವಿ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ಈತ ಬಿಎಸ್ವೈ ಅಭಿಮಾನಿಯಾಗಿದ್ದನು. ನಿನ್ನೆ ರಾಜೀನಾಮೆ ನೀಡಿರುವ ಕುರಿತಾಗಿ ಮನನೊಂದು ನೇಣಿಗೆ ಶರಣಾಗಿದ್ದಾನೆ”