ಕಾಪು: ನಿರುದ್ಯೋಗದಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ
ಉಡುಪಿ, ಜು.27(ಉಡುಪಿ ಟೈಮ್ಸ್ ವರದಿ): ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನೋರ್ವನನ್ನು ರಕ್ಷಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಶಾಂತ್ ಶೆಟ್ಟಿ (30) ರಕ್ಷಿಸಲ್ಪಟ್ಟ ಯುವಕ. ನಿನ್ನೆ ತಡರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೇಳೆ ಯುವಕನನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಉದ್ಯಾವರ ರಾಮ್ ದಾಸ್ ಪಾಲನ್ ಅವರ ಸಹಕಾರದೊಂದಿಗೆ ರಕ್ಷಿಸಿ ದೊಡ್ಡಣಗುಡ್ಡೆಯ ಡಾ ಎ.ವಿ ಬಾಳಿಗ ಆಸ್ಪತ್ರೆಗೆ ದಾಖಲಿಸಿದ್ದರು.
ನಿರುದ್ಯೋಗ ಸಮಸ್ಯೆಯಿಂದ ಹಾಗೂ ಜೀವನ ಸಾಗಿಸಲು ಹೆದರಿಕೆಯಿಂದ ಅಸಾಹಯಕತೆ ಎದುರಾಯಿತು. ಹಾಗಾಗಿ ಆತ್ಮಹತ್ಯೆಗೆ ನಿರ್ಧರಿಸಿದ್ದೆ ಎಂದು ಯುವಕ ವಿಶು ಶೆಟ್ಟಿಯವರಲ್ಲಿ ಹೇಳಿಕೊಂಡಿದ್ದಾನೆ. ಇದೀಗ ಯುವಕನನ್ನು ರಕ್ಷಿಸಲಾಗಿದ್ದು, ಯುವಕನ ವಾರಸುದಾರರು ಅಥವಾ ಸಂಬಂಧಪಟ್ಟವರು ತುರ್ತಾಗಿ ಡಾ.ಎ.ವಿ.ಬಾಳಿಗ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.