ಉಡುಪಿ: 650 ಚಿನ್ನ ಬೆಳ್ಳಿ ಕೆಲಸಗಾರಿಗೆ ಆಹಾರ ಕಿಟ್ ವಿತರಣೆ

ಉಡುಪಿ: ಚಿನ್ನ ಬೆಳ್ಳಿ ಕೆಲಸಗಾರರ ಸಂಘದ 650 ಕಾರ್ಮಿಕರಿಗೆ ಸರ್ಕಾರದ ಆಹಾರ ಕಿಟ್ ವಿತರಿಸಲಾಯಿತು.

ಕಿಟ್ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಕಿಶೋರ್ ಆರ್. ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಅಧಿಕಾರಿ ಕುಮಾರ್ ಬಿ ಆರ್, ರಾಷ್ತ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ರತ್ನಾಕರ್ ಆಚಾರ್ಯ, ಸಂಘದ ಗೌರವ ಅಧ್ಯಕ್ಷ ಸುಂದರ ಆಚಾರ್ಯ, ಮಾಜಿ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ,ಉಪಾಧ್ಯಕ್ಷ ಪ್ರಭಾಕರ್ ಆಚಾರ್ಯ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರಶಾಂತ ಆಚಾರ್ಯ ಸ್ವಾಗತಿಸಿ, ರವಿಚಂದ್ರ ಆಚಾರ್ಯ ಧನ್ಯವಾದವಿತ್ತರು.

Leave a Reply

Your email address will not be published. Required fields are marked *

error: Content is protected !!