ಬಿಜೆಪಿ ಅಧಿಕಾರ ದುರುಪಯೋಗ ಮಾಡಿ ಗೆಲುವು ಸಾಧಿಸಿದೆ- ಜಿ.ಪರಮೇಶ್ವರ್

ಉಡುಪಿ ಸೆ.7: ಬಿಜೆಪಿ ಅಧಿಕಾರ ದುರುಪಯೋಗ ಮಾಡಿ ಗೆಲುವು ಸಾಧಿಸಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಆರೋಪಿಸಿದ್ದಾರೆ.

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದ ವಿಚಾರವಾಗಿ ಉಡುಪಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು,  ದೇಶದಲ್ಲಿ ಅಗತ್ಯವಸ್ತುಗಳ ಬೆಲೆ ಏರಿಕೆ ನಡುವೆಯೂ ಬಿಜೆಪಿ ಗೆದ್ದಿದೆ. ಇದು ಅಧಿಕಾರದ ದುರುಪಯೋಗದ ಗೆಲುವು ಎಂದಿದ್ದಾರೆ. ಇದೇ ವೇಳೆ, ಈ ಫಲಿತಾಂಶದಿಂದ ಕಾಂಗ್ರೆಸ್ಸಿಗೆ ನಿರಾಸೆಯಾಗಿಲ್ಲ ಎಂದ ಅವರು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಇನ್ನು ಇಂದು ಸಂಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆದಿರುವ ಸಭೆಯ ಕುರಿತು ಮಾಹಿತಿ ನೀಡಿದ ಅವರು, ಸಭೆಯಲ್ಲಿ ಸರಕಾರವನ್ನು ಯಾವ ರೀತಿ ಪ್ರಶ್ನೆ ಮಾಡಬೇಕು, ಸರಕಾರದ ವೈಫಲ್ಯಗಳನ್ನು ರಾಜ್ಯಕ್ಕೆ ಹೇಗೆ ಮುಟ್ಟಿಸಬೇಕು ಎಂಬ ಬಗ್ಗೆ ಕಾರ್ಯತಂತ್ರ ರೂಪಿಸುತ್ತೇವೆ. ಜೊತೆಗೆ ಕೋವಿಡ್ ಚಿಕಿತ್ಸೆಯಲ್ಲಿ ಭ್ರಷ್ಟಾಚಾರ ಮತ್ತು ರಾಜ್ಯ ಸರಕಾರದ ವೈಫಲ್ಯದ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಹೇಳಿದರು. 

Leave a Reply

Your email address will not be published. Required fields are marked *

error: Content is protected !!