ಐದು ರಾಜ್ಯಗಳಲ್ಲಿ ಚುನಾವಣೆ: ಉ.ಪ್ರ. ಸಹಉಸ್ತುವಾರಿಯಾಗಿ ಶೋಭಾ ಕರಂದ್ಲಾಜೆ

ನವದೆಹಲಿ, ಸೆ.8: ಐದು ರಾಜ್ಯಗಳಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳೂ ತಯಾರಿ ನಡೆಸುತ್ತಿದೆ. ಇದೀಗ ಬಿಜೆಪಿ 5 ರಾಜ್ಯಗಳ ಉಸ್ತುವಾರಿಗಳ ಹೆಸರನ್ನು ಇಂದು ಪ್ರಕಟಿಸಿದ್ದು ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಉತ್ತರ ಪ್ರದೇಶದ ಉಸ್ತುವಾರಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ನೀಡಲಾಗಿದ್ದು, ಇವರೊಂದಿಗೆ 8 ಕೇಂದ್ರ ಸಚಿವರಿಗೆ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನೀಡಲಾಗಿದೆ.

ಕೇಂದ್ರ ಸಚಿವ ಧಮೇರ್ಂದ್ರ ಪ್ರಧಾನ್ ಅವರು ಮುಖ್ಯ ಉಸ್ತುವಾರಿಯಾಗಿರಲಿದ್ದು, ಅವರ ಜೊತೆಗೆ ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಸರೋಜ್ ಪಾಂಡೆ, ಶೋಭಾ ಕರಂದ್ಲಾಜೆ, ಕ್ಯಾಪ್ಟನ್ ಅಭಿಮನ್ಯು, ಅನ್ನಪೂರ್ಣ ದೇವಿ ಮತ್ತು ವಿವೇಕ್ ಠಾಕೂರ್ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಪಂಜಾಬ್ ಜವಾಬ್ದಾರಿಯನ್ನು ಕ್ಯಾಬಿನೆಟ್ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲಾಗಿದೆ. ಇವರೊಂದಿಗೆ ಹರ್ದೀಪ್ ಪುರಿ, ಮೀನಾಕ್ಷಿ ಲೇಖಿ, ವಿನೋದ್ ಚಾವ್ಡಾ ಇರಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರಾಖಂಡದ ಮುಖ್ಯ ಉಸ್ತುವಾರಿ ವಹಿಸಲಿದ್ದಾರೆ.

ಲಾಕೆಟ್ ಚಟರ್ಜಿ ಮತ್ತು ಸರ್ದಾರ್ ಆರ್ ಪಿ ಸಿಂಗ್ ಅವರು ಕೂಡ ಪ್ರಭಾರಿ ಪಾತ್ರ ವಹಿಸಲಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯ ಮಂತ್ರಿ ದೇವೇಂದ್ರ ಫಡ್ನವೀಸ್ ಗೋವಾ ಹಾಗೂ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಮಣಿಪುರದ ಉಸ್ತುವಾರಿಯಾಗಿ ಜವಾಬ್ದಾರಿ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

error: Content is protected !!