ಮುಂಬೈ: ಗಣೇಶ ವಿಸರ್ಜನೆ ವೇಳೆ ಸಮುದ್ರದಲ್ಲಿ ಮುಳುಗಿ 3 ಯುವಕರು ನಾಪತ್ತೆ

ಮುಂಬೈ ಸೆ.20: ನಗರದ ವರ್ಸೋವಾ ಬೀಚ್‍ನಲ್ಲಿ ಗಣೇಶ ವಿಸರ್ಜನೆ ವೇಳೆ ಸಮುದ್ರದಲ್ಲಿ ಮುಳುಗಿ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಮೂವರ ಶೋಧಕಾರ್ಯ ನಡೆಯುತ್ತಿದೆ.

ಈ ಬಗ್ಗೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಗಣೇಶ ವಿಸರ್ಜನೆ ವೇಳೆ ಐವರು ಹುಡುಗರು ನೀರಲ್ಲಿ ಮುಳುಗಿದ್ದರು, ಈ ಪೈಕಿ ಮೂವರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಇನ್ನು ನಾಪತ್ತೆಯಾಗಿರುವವರ ಹುಡುಕಾಟಕ್ಕೆ ನೌಕಾಪಡೆಯ ಡೈವರ್‍ಗಳ ಸಹಾಯವನ್ನು ಕೋರಲಾಗಿದ್ದು, ಅಗ್ನಿಶಾಮಕ ಯಂತ್ರ, ಒಂದು ದೋಣಿ, ಜೀವರಕ್ಷಕರು ಮತ್ತು ಇತರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!