ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಸೆ.28 : ಮಂಗಳೂರಿನಲ್ಲಿರುವುದು ತಾಲಿಬಾನ್ ಸರ್ಕಾರವೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಲಿ ಮುಖಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಈ ಬಗ್ಗೆ ಟ್ವೀಟ್ ಮಾಡಿ ಸನ್ಮಾನ್ಯ ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ ಗಳದ್ದಾ? ಎಂದು ಪ್ರಶ್ನಿಸಿ ಬರೆದುಕೊಂಡಿದ್ದಾರೆ.

ನಗರದ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್’ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಕಾರಣಕ್ಕೆ  ತಡೆದು ಪ್ರಶ್ನಿಸಿ, ನಿಂದಿಸಿದ ಘಟನೆ ನಡೆದಿತ್ತು. ಈ ಬಗ್ಗೆ ವಿಡಿಯೋ ಒಂದು‌ ಸಾಮಾಜಿಕ ಜಾಲತಾದಲ್ಲಿ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಐವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿರುವ ಘಟನೆ  ಕೂಡಾ ನಡೆದಿದೆ.

Leave a Reply

Your email address will not be published. Required fields are marked *

error: Content is protected !!