ಶೇ 12.8 ರಷ್ಟು ಜನರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ- ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್‌

ತಿರುವನಂತಪುರ ಅ.11: ಕೇರಳದ ಒಟ್ಟು ಜನಸಂಖ್ಯೆಯಲ್ಲಿ ಶೇ 12.8 ರಷ್ಟು ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದು, ಅವರಿಗೆ ವೈಜ್ಞಾನಿಕ ಚಿಕಿತ್ಸೆಯ ಅಗತ್ಯವಿರುತ್ತದೆ. ಆದರೆ ಇವರಲ್ಲಿ ಕೇವಲ ಶೇ 15 ಜನರು ಮಾತ್ರ ವೈಜ್ಞಾನಿಕ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ತಿಳಿಸಿದ್ದಾರೆ.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಕೇರಳದ ತಿರುವನಂತಪುರದ ವೈದ್ಯಕೀಯ ಕಾಲೇಜಿನ ಮನೋವೈದ್ಯಶಾಸ್ತ್ರ ವಿಭಾಗ, ಭಾರತೀಯ ಮನೋವೈದ್ಯಕೀಯ ಸಂಘದ ಕೇರಳ ಘಟಕ ಮತ್ತು ಕೇರಳ ಶಾಸ್ತ್ರ ಸಾಹಿತ್ಯ ಪರಿಷತ್ ನಿನ್ನೆ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಚಿಕಿತ್ಸಾ ಕೇಂದ್ರಗಳು ಅಥವಾ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಜನ ಚಿಕಿತ್ಸೆಯಿಂದ ವಂಚಿತರಾಗುತ್ತಿಲ್ಲ. ಬದಲಾಗಿ ಜನರು ವೈದ್ಯಕೀಯ ಸೇವೆಗಳ ಪ್ರಯೋಜನ ಪಡೆಯದೇ ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ತೀವ್ರಗೊಳಿಸುವುದು ಅಗತ್ಯವಾಗಿದೆ. ‘ಮಾನಸಿಕ ಆರೋಗ್ಯ ಸಾಕ್ಷರತೆ ಅತ್ಯಗತ್ಯವಾಗಿದ್ದು ಪ್ರತಿಯೊಬ್ಬರು ದೈಹಿಕ ಕಾಯಿಲೆಗಳ ಬಗ್ಗೆ ಗಮನಹರಿಸುತ್ತಾರೆ ಮತ್ತು ಅದಕ್ಕೆ ಸಕಾಲಿಕ ಚಿಕಿತ್ಸೆ ಪಡೆಯುತ್ತಾರೆ. ಆದರೆ ಹೆಚ್ಚಿನ ಜನರಿಗೆ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಲು ಅಥವಾ ವೈಜ್ಞಾನಿಕ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಜನರು ಮಾನಸಿಕ ಆರೋಗ್ಯದ ನಿಖರ ತಿಳುವಳಿಕೆ ಹೊಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಆರೋಗ್ಯ ಸಮಸ್ಯೆ ನಿವಾರಿಸಲು ಸರ್ಕಾರ ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ನೀಡಿದ ಅವರು,  ‘ಆರೋಗ್ಯ ಇಲಾಖೆಯೂ ತಳಮಟ್ಟದಿಂದ ಮಾನಸಿಕ ಆರೋಗ್ಯ ಚಟುವಟಿಕೆಗಳನ್ನು ತೀವ್ರಗೊಳಿಸಲು ಹೊರಟಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಮಾನಸಿಕ ಆರೋಗ್ಯ ಕೇಂದ್ರಗಳು ಮತ್ತು ಮಾನಸಿಕ ಆರೋಗ್ಯ ಇಲಾಖೆಗಳ ಚಟುವಟಿಕೆಗಳನ್ನು ಬಲಪಡಿಸಲಾಗುವುದು ಮತ್ತು ಈ ವಿಷಯದ ಕುರಿತು ಸಂಶೋಧನೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!