ಮಲ್ಪೆ: ಅ.17 ರಂದು ಮೀನುಗಾರಿಕಾ ಮತ್ತು ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರ ಸಂಘದ ಡೀಸೆಲ್ ಬಂಕ್ ಉದ್ಘಾಟನೆ
ಮಲ್ಪೆ ಅ.16(ಉಡುಪಿ ಟೈಮ್ಸ್ ವರದಿ): ಉದ್ಯಾವರದ ಪಿತ್ರೋಡಿಯ ಮೀನುಗಾರಿಕಾ ಮತ್ತು ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರ ಸಂಘದ ನೂತನ ಡೀಸೆಲ್ ಬಂಕ್ ಅ.17 ರಂದು ಮಲ್ಪೆಯ ಬಾಪು ತೋಟದಲ್ಲಿ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ನೂತನ ಡೀಸೆಲ್ ಬಂಕ್ ನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮೀನುಗಾರಿಕಾ ಮತ್ತು ಮೀನು ಉತ್ಪನ್ನ ಸಾಮಾಗ್ರಿಗಳ ಸಹಕಾರ ಸಂಘದ ಅಧ್ಯಕ್ಷ ಗಿರೀಶ್ ವಿ. ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಮಲ್ಪೆ ಮೀನುಗಾರಿಕೆ ಅಪಾರ ನಿರ್ದೇಶಕ ತಿಪ್ಪೆ ಸ್ವಾಮಿ ಡಿ., ಮಲ್ಪೆ ಮೀನುಗಾರಿಕೆ ಜಂಟಿ ನಿರ್ದೇಶಕ ಗಣೇಶ್ ಕೆ., ಕುಂದಾಪುರದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ., ಭಾರತೀಯ ಸ್ಟೇಟ್ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ತರುಣ್ ಫಾಯ್ದೆ, ಉಡುಪಿ ನ್ಯಾಯವಾದಿ ಎಸ್ ಗುರುರಾಜ್ ಐತಾಳ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಹದಿನಾಲ್ಕು ಪಟ್ನ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೇಶವ್ ಎಂ.ಕೋಟ್ಯಾನ್, ಮಲ್ಪೆ ವ್ಯಾಪರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್, ಹರಿಯಪ್ಪ ಕೋಟ್ಯಾನ್, ಎಚ್.ಪಿ.ಸಿ.ಎಲ್ ನ ಸೇಲ್ಸ್ ಮ್ಯಾನೇಜರ್ ಸುಮಿತ್ ಉಪಸ್ಥಿತರಿರಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.