| ಉಡುಪಿ ಅ.17: ಪೊಲೀಸರು ಕೇಸರಿ ಬಟ್ಟೆ ಧರಿಸಿದರೆ ನಿಮಗೆ ಏನು ಸಮಸ್ಯೆ?’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ರಘುಪತಿ ಭಟ್ ಅವರು ಪ್ರಶ್ನಿಸಿದ್ದಾರೆ.
ಪೊಲೀಸರು ಕೇಸರಿ ಉಡುಪು ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸರ ಕೈಗೆ ತ್ರಿಶೂಲ ಕೊಟ್ಟುಬಿಡಿ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ಗೆ ಮರುಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ಶಾಸಕರು, “ನಿಮಗೆ ಕೇಸರಿ ಕಂಡರೆ ಯಾಕೆ ಅಷ್ಟು ಭಯ? ಟಿಪ್ಪುವಿನ ಪೋಷಾಕು ಧರಿಸಿ, ಖಡ್ಗ ಹಿಡಿದಿಲ್ಲವೇ? ಪಚ್ಚೆ ಶಾಲು, ಟೊಪ್ಪಿ ಧರಿಸಿದಾಗ ಭಾವೈಕ್ಯತೆ ನೆನಪಾಗಲಿಲ್ಲವೇ?
ಪೊಲೀಸರು ಕೇಸರಿ ಬಟ್ಟೆ ಧರಿಸಿದರೆ ನಿಮಗೆ ಏನು ಸಮಸ್ಯೆ?” ಎಂದು ಪ್ರಶ್ನಿಸಿದ್ದಾರೆ. “ದೇಶದಲ್ಲಿ ಕೇಸರಿಯನ್ನು ಹಿಂದಿನಿಂದಲೂ ಪೂಜಿಸಿಕೊಂಡು ಬಂದಿದ್ದೇವೆ. ಅಲ್ಪಸಂಖ್ಯಾತರ ಮತಬ್ಯಾಂಕ್ ಉದ್ದೇಶವಿಟ್ಟುಕೊಂಡು ಕೇಸರಿಯನ್ನು ದ್ವೇಷಿಸಿದ್ದೀರಿ. ಕೇಸರಿಯನ್ನು ದ್ವೇಷಿಸಿದಕ್ಕೆ ಕಾಂಗ್ರೆಸ್ಗೆ ಈ ಪರಿಸ್ಥಿತಿ ಬಂದಿದೆ. ಕೇಸರಿಯನ್ನು ವಿರೋಧಿಸಿದರೆ ಇನ್ನಷ್ಟು ಮೂಲೆಗುಂಪಾಗುತ್ತೀರಿ” ಎಂದರು.
ಇನ್ನು ಹಬ್ಬದ ದಿನ ಪೊಲೀಸರು ಕೇಸರಿ ಧರಿಸಿದ್ದನ್ನು ಸಮರ್ಥಿಸುತ್ತೇನೆ. ನಮ್ಮ ರಾಷ್ಟ್ರ ಧ್ವಜದಲ್ಲಿ ಕೇಸರಿ ಬಣ್ಣ ಇದೆ. ಕೇಸರಿ ಧರಿಸಿದ್ದು ಅಪರಾಧವೇನಲ್ಲ. ಸಿದ್ದರಾಮಯ್ಯ ಮಾನಸಿಕತೆ ಈ ಟ್ವೀಟ್ನಿಂದ ಗೊತ್ತಾಗುತ್ತೆ. ಪೊಲೀಸರಿಗೆ ತ್ರಿಶೂಲ ಕೊಡಿ ಎಂದು ಟೀಕಿಸಿದ್ದ ಸಿದ್ದರಾಮಯ್ಯ. ತ್ರಿಶೂಲ ಯಾರನ್ನೂ ಕೊಲ್ಲುವ ಆಯುಧ ವಲ್ಲ. ತ್ರಿಶೂಲ ಹಿಂದೂಗಳು ಆರಾಧಿಸುವ ಆಯುಧ” ಎಂದು ಹೇಳಿದ್ದಾರೆ. | |