ಗಂಗೊಳ್ಳಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಗಂಗೊಳ್ಳಿ ಅ.18 (ಉಡುಪಿ ಟೈಮ್ಸ್ ವರದಿ): ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಡೆದಿದೆ.

ರಾಮ ಗೌಡ (45) ಮೃತಪಟ್ಟವರು. ಇವರು ಅ.11 ರಂದು ಬೆಳಿಗ್ಗೆ ಮನೆಯ ತೆಂಗಿನ ಮರವನ್ನು ಹತ್ತಿ ತೆಂಗಿನ ಕಾಯಿಯನ್ನು ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ 25 ಅಡಿ ಮೇಲಿನಿಂದ ಬಿದ್ದಿದ್ದರು. ಪರಿಣಾಮ ತೀವ್ರವಾಗಿ ಕುತ್ತಿಗೆ ತೀವ್ರ ಜಖಂಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಅಲ್ಲಿಂದ ರಾಮ ಗೌಡ ಅವರನ್ನು ಸುರತ್ಕಲ್ ನ ಮುಕ್ಕದ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Leave a Reply

Your email address will not be published. Required fields are marked *

error: Content is protected !!