ಭೀಮಾ ಜ್ಯುವೆಲ್ಲರ್ಸ್ ಮಾಲಕ ಕೃಷ್ಣನ್ ವಿಧಿವಶ

ಉಡುಪಿ: ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರ ಸಹಿತ ಅನೇಕ ಕಡೆಗಳಲ್ಲಿ ಪ್ರಸಿದ್ಧ ಭೀಮಾ ಜ್ಯುವೆಲ್ಲರ್ಸ್ ಸಂಸ್ಥೆಗಳ ಮಾಲಕ ಕೊಡುಗೈ ದಾನಿ ಬಿ. ಕೃಷ್ಣನ್ (76) ಇಂದು ಸೋಮವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು .

ಉದ್ಯಮದ ಲಾಭಾಂಶದಲ್ಲಿ ಹತ್ತಾರು ಧಾರ್ಮಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಗಳಿಗೆ ಉದಾರ ದಾನ ನೀಡಿ ಧರ್ಮಬೀರು ಎನಿಸಿದ್ದರು. ಉಡುಪಿಯ ಕೃಷ್ಣ ಮಠ ಅಷ್ಟಮಠಗಳಿಗೆ ಅಪಾರ ದೇಣಿಗೆ ನೀಡುತ್ತಿದ್ದರು .

ಪತ್ನಿ, ಮೂವರು ಪುತ್ರಿಯರು ಓರ್ವ ಪುತ್ರನನ್ನು ಅಗಲಿದ್ದಾರೆ .

ಅದಮಾರು, ಪೇಜಾವರ, ಪಲಿಮಾರು, ಪುತ್ತಿಗೆ, ಕಾಣಿಯೂರು, ಕೃಷ್ಣಾಪುರ ಸೇರಿದಂತೆ ಅಷ್ಟಮಠಾಧೀಶರು, ಶಾಸಕ ರಘುಪತಿ ಭಟ್ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಿತ ಗಣ್ಯರು ಕೃಷ್ಣನ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!